Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : 12 ಮಂದಿ ಸಜೀವ ದಹನ

Facebook
Twitter
Telegram
WhatsApp

 

ಸುದ್ದಿಒನ್, ಮಧ್ಯಪ್ರದೇಶ, ಡಿಸೆಂಬರ್.28 :  ಬುಧವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಂದೆ ಬರುತ್ತಿದ್ದ ಪ್ರಯಾಣಿಕರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 12 ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

 

 

ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಗುನಾ-ಆರನ್ ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. 12 ಮಂದಿ ಸಜೀವ ದಹನವಾಗಿದ್ದಾರೆ.
ಅವರಲ್ಲಿ 9 ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇತರ 13 ಮಂದಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ಟ್ವೀಟ್ ಮಾಡಿದ್ದಾರೆ. ಬೆಂಕಿಯಲ್ಲಿ ಶವಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿವೆ ಎಂದು ಹೇಳಲಾಗಿದ್ದು, ಗುರುತಿಸಲು ಡಿಎನ್ ಎ ಪರೀಕ್ಷೆ ನಡೆಸಲಾಗುತ್ತಿದೆ. ಅಪಘಾತದ ಸ್ಥಳದಿಂದ ಎಲ್ಲಾ ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ಹೇಳಿದರು. ಅಪಘಾತದ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ. ಮಾಹಿತಿ ಪಡೆದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಗಾಯಗೊಂಡಿರುವ ಪ್ರತಿಯೊಬ್ಬರಿಗೂ ರೂ.50 ಸಾವಿರ ನೀಡಲಾಗುವುದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಯಾದವಾಡ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ನೀವು ಇಷ್ಟಪಟ್ಟವರ ಜೊತೆ ಮದುವೆ ನಿಶ್ಚಿತ

ಈ ರಾಶಿಯವರು ನೀವು ಇಷ್ಟಪಟ್ಟವರ ಜೊತೆ ಮದುವೆ ನಿಶ್ಚಿತ, ಈ ರಾಶಿಯ ಹೋಟೆಲ್, ಬೇಕರಿ ಉದ್ಯಮದಾರರು ಆರ್ಥಿಕ ಸಂಕಷ್ಟದಿಂದ ಪಾರು ಲಾಭದ ಕಡೆಗೆ ಪ್ರಯಾಣ, ಸೋಮವಾರರಾಶಿ ಭವಿಷ್ಯ ಜೂನ್-3,2024 ಸೂರ್ಯೋದಯ: 05:44, ಸೂರ್ಯಾಸ್ತ :

ವಾಹನ ಸವಾರರಿಗೆ ಶಾಕ್ :  ಟೋಲ್ ಶುಲ್ಕ ಹೆಚ್ಚಿಸಿದ NHAI

  ಸುದ್ದಿಒನ್, ನವದೆಹಲಿ, ಜೂ.02  : ಭಾರತದಾದ್ಯಂತ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್ ತೆರಿಗೆಗಳನ್ನು ಹೆಚ್ಚಿಸಲಾಗಿದೆ. ಸರಾಸರಿ 5 ಪ್ರತಿಶತದಷ್ಟು ಟೋಲ್ ಶುಲ್ಕವನ್ನು NHAI ಹೆಚ್ಚಿಸಿದೆ. ಪ್ರತಿ ವರ್ಷ ಏಪ್ರಿಲ್ 1 ರಿಂದ

ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಶಿಕ್ಷಣ ಅಗತ್ಯ : ಉಮೇಶ್ ವಿ. ತುಪ್ಪದ

  ಸುದ್ದಿಒನ್, ಚಿತ್ರದುರ್ಗ, (ಜೂ, 2) : ವಿದ್ಯಾರ್ಥಿಗಳ ಮನೋಭೂಮಿಕೆಯನ್ನು ಹದ ಮಾಡಿ ಅದರಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡಗೆ ಗಮನ ಹರಿಸಿ ಪಾಠವನ್ನು ಮಾಡುವಂತಹ ಯಾವುದೇ ಅಧ್ಯಾಪಕ ಅವರ ಮನಸ್ಸಲ್ಲಿ ಸದಾ

error: Content is protected !!