Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನಡೆಯಿತು ಸಚಿವ ಭೈರತಿ‌ ಸುರೇಶ್ ಮಗನ ನಿಶ್ಚಿತಾರ್ಥ

Facebook
Twitter
Telegram
WhatsApp

ಬೆಂಗಳೂರು: ರಾಜಕಾರಣದಲ್ಲಿ ಯಾರು ಯಾವತ್ತು ಶತ್ರುಗಳಲ್ಲ. ಮಾತಲ್ಲಿ ಹೊಡೆದಾಡಿಕೊಂಡವರು, ದ್ವೇಷ ಕಾರಿದವರು ಸಭೆ ಸಮಾರಂಭಗಳಲ್ಲಿ ಸಿಕ್ಕಾಗ ಆತ್ಮೀಯವಾಗಿಯೇ ಮಾತಾಡುತ್ತಾರೆ. ಅಲ್ಲಿ ಯಾವ ರಾಜಕೀಯವೂ ಬರಲ್ಲ.. ಯಾವ ದ್ವೇಷವೂ ಬರಲ್ಲ. ಇದಕ್ಕೆಲ್ಲಾ ಉದಾಹರಣೆಯೆಂಬಂತೆ ಇಂದು ಬಿಜೆಪಿ ಶಾಸಕನ ಮಗಳ ಜೊತೆಗೆ ಸಚಿವರ ಮಗನ ನಿಶ್ಚಿತಾರ್ಥ ನಡೆದಿದೆ. ಕಾಂಗ್ರೆಸ್ ನ ಭೈರತಿ ಸುರೇಶ್ ಹಾಗೂ ಬಿಜೆಪಿಯ ಎಸ್.ಆರ್. ವಿಶ್ವನಾಥ ್ ಅಧಿಕೃತವಾಗಿ ಬೀಗರಾಗಿದ್ದಾರೆ.

ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಸಚಿವರ ಮಗನ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ಈ ನಿಶ್ಚಿತಾರ್ಥಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿ ನವ ವಧು-ವರರಿಗೆ ಶುಭ ಹಾರೈಸಿದ್ದಾರೆ. ಜೊತೆಗೆಸಚಿವ ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಲ, ಎಂ.ಸಿ ಸುಧಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಗೋವಿಂದ ರಾಜು ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.

ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥವನ್ನು ಸಚಿವ ಭೈರತಿ ಸುರೇಶ್ ಮಗನ ಜೊತೆಗೆ ನೆರವೇರಿಸಿದ್ದಾರೆ. ಖಾಸಗಿ ಹೊಟೇಲ್ ನಲ್ಲಿ ನಡೆದ ಈ ನಿಶ್ಚಿತಾರ್ಥ ಕುಟುಂಬಸ್ಥರು, ಆಪ್ತರು, ರಾಜಕೀಯ ಗಣ್ಯರ ಸಮ್ಮುಖದಲ್ಲಿ ನೆರವೇರಿದೆ. ನಿಶ್ಚಿತಾರ್ಥಕ್ಕೆ ಬಂದ ಅತಿಥಿಗಳು ಕೂಡ ಗಂಡು-ಹೆಣ್ಣಿಗೆ ಹಾರೈಸಿದರು. ಮದುವೆ ದಿನಾಂಕವನ್ನು ಇನ್ನು ನಿಗಧಿ ಮಾಡಿಲ್ಲ. ಅತಿ ಶೀಘ್ರದಲ್ಲಿಯೇ ಅದ್ದೂರಿ ಮದುವೆಗೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಸಾಕ್ಷಿಯಾಗಬಹುದು.

ರಾಜಕೀಯ ದ್ವೇಷ, ಕಿತ್ತಾಟ, ಅಪವಾದಗಳೆಲ್ಲ ಚುನಾವಣೆಗಷ್ಟೇ ಸೀಮಿತ ಎನ್ನುವುದನ್ನು ಈ ಇಬ್ಬರು ನಾಯಕರು ಬೀಗರಾಗುವ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಾಜಕೀಯದಲ್ಲಿ ದ್ವೇಷ ಮೀರಿ ಸಂಬಂಧಿಗಳಾಗಬಹುದು ಎಂಬುದನ್ನು ನಿರೂಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!