Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಹುನಿರೀಕ್ಷಿತ ಪ್ರಭಾಸ್ ನಟನೆಯ ‘ಕಲ್ಕಿ 2898AD’ ಸಿನಿಮಾ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕ : ಹೇಗಿದೆ ಸಿನಿಮಾ..?

Facebook
Twitter
Telegram
WhatsApp

ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898AD ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು. ಪ್ರಭಾಸ್ ನಟನೆಯ ಈ ಸಿನಿಮಾ ಬಗ್ಗೆ ಕುತೂಹಲವೂ ಹೆಚ್ಚಿತ್ತು. ಇಂದು ದೇಶದಾದ್ಯಂತ ಸಿನಿಮಾ ರಿಲೀಸ್ ಆಗಿದೆ‌. ಅಭಿಮಾನಿಗಳು ಕೂಡ ಅದ್ದೂರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ನೋಡಿ ಎಂಜಾಯ್ ಮಾಡಿದ್ದಾರೆ. ಅದರಲ್ಲೂ ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಟೆಯಂತ ಘಟಾನುಘಟಿ ಕಲಾವಿದರೇ ಅಭಿನಯಿಸಿದ್ದಾರೆ‌. ಬಹು ಕೋಟಿ ವೆಚ್ಚದಲ್ಲಿ ಸಿನಿಮಾವನ್ನು ತೆರೆಮೇಲೆ ತರಲಾಗಿದೆ.

ಸಿನಿಮಾದ ಕಥೆ ಹೀಗಿದೆ:

ಕಲಿಯುಗದ ಅಂತ್ಯ ಹಾಗೂ ಕಲ್ಕಿ ಆಗಮನದ ಮಧ್ಯೆ ನಡೆಯುವಂತ ಕಥೆಯಿದಾಗಿದೆ. ಅಶ್ವತ್ಥಾಮನ ಪಾತ್ರದಲ್ಲಿ ಅಮಿತಾಬ್ ಬಚ್ಚನ್ ಕಾಣಿಸಿಕೊಂಡಿದ್ದಾರೆ. ಕಲ್ಕಿಯ ಆಗಮನಕ್ಕಾಗಿ ಕಾಯುತ್ತಿರುವ ಸುಮತಿ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ಸುಮತಿಯ ಹೊಟ್ಟೆಯಲ್ಲಿ ಕಲ್ಕಿ ಹುಟ್ಟುತ್ತಾನೆ. ಕಾಶಿಯಲ್ಲಿ ವಾಸಿಸುವ ಭೈರವನ ಪಾತ್ರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ಈ ಭೈರವ ಸ್ವರ್ಗದಂತೆ ಕಾಣುವ ಕಾಂಪ್ಲೆಕ್ಸ್ ಗೆ ಹೋಗುವುದಕ್ಕೆ ಹಾತೊರೆಯುತ್ತಾ ಇರುತ್ತಾನೆ. ಕಾಶಿ ನಗರದ ಶೈತಾನ್ ನಾಯಕನ ಪಾತ್ರದಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ವಿಶೇಷ ಅತಿಥಿ ಪಾತ್ರದಲ್ಲಿ ವಿಜಯ್ ದೇವರಕೊಂಡ, ದುಲ್ಕರ್ ಸಲ್ಮಾನ್, ರಾಜಮೌಳಿ, ದಿಶಾ ಪಟಾನಿ, ಶೋಭನಾ, ಬ್ರಹ್ಮಾನಂದ್, ಮಾಳವಿಕ ನಾಯರ್ ಕೂಡ ಕಾಣಿಸಿಕೊಂಡಿದ್ದಾರಡ.

ಪಾತ್ರಗಳ ಗೆಟಪ್, ಬಳಸುವ ವಾಹನಗಳೆಲ್ಲವೂ ವಿಶೇಷವಾಗಿದೆ. ಆಕ್ಷನ್ ಸೀನ್ ಗಳಂತೂ ಬೇರೆ ಲೆವೆಲ್ ನಲ್ಲಿಯೇ ಇದಾವೆ. ಈ ಸಿನಿಮಾ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳಿಗೆ ಹಬ್ಬವನ್ನುಂಟು ಮಾಡಿದೆ. ಇನ್ನು ಈ ಸಿನಿಮಾದಲ್ಲಿ ಬಳಸಲಾಗಿರುವ ಬುಜ್ಜಿ ಎಂಬ ಕಾರು ಎಲ್ಲರ ಆಕರ್ಷಣಿಯ ಬಿಂದುವಾಗಿದೆ. ಅದ್ಭುತ ಪ್ರಯತ್ನ, ಅದ್ಬುತ ಪ್ರಯೋಗಕ್ಕೆ ಪ್ರೇಕ್ಷಕರು ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

ದರ್ಶನ್ ನ್ಯಾಯಾಂಗ ಬಂಧನ ಇಂದು ಅಂತ್ಯ : ದಾಸನ ಪರ ವಕೀಲರ್ಯಾಕೆ ಇನ್ನು ಜಾಮೀನು ಅರ್ಜಿ ಸಲ್ಲಿಸಿಲ್ಲ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ಇಂದು ಮತ್ತೊಮ್ಮೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ನ್ಯಾಯಾಧೀಸರ ಎದುರು ಹಾಜರು ಪಡಿಸಲಿದ್ದಾರೆ. ವಿಡಿಯೋ

error: Content is protected !!