Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಟಿಜೆ ಅಬ್ರಾಹಂ ಮೂಡಾಗೆ ಭೇಟಿ..!

Facebook
Twitter
Telegram
WhatsApp

ಮೈಸೂರು : ಮೂಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಇಂದು ಮೂಡಾಗೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಕಮಿಷನರ್ ರಘುನಂದನ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ. ಹಲವು ದಾಖಲೆಗಳ ಸಮೇತ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು.

ಮೂಡಾ ಕಮೀಷನರ್ ರಘುನಂದನ್ ಅವರನ್ನು ಭೇಟಿ ನೀಡಿದ ಬಳಿಕ ಮಾತನಾಡಿದ ಟಿಜೆ ಅಬ್ರಾಹಂ ಅವರು, ಬಿಎಸ್ವೈ ಹಾಗೂ ಶೆಟ್ಟರ್ ಅವರ ವಿರುದ್ಧ ಆರೋಪ ಮಾಡಿದಾಗ ನನ್ನದು ಸತ್ಯ ಇತ್ತು. ಈಗ ಇವರ ಬಗ್ಗೆ ಮಾತಮಾಡಿದರೆ ನಾನು ಬ್ಲ್ಯಾಕ್ ಮೇಲ್ ಮಾಡ್ತಾ ಇದ್ದೀನಿ. ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ಇದನ್ನೆಲ್ಲ ನೋಡಿದರೆ ಸಿಎಂ ಸಿದ್ದರಾಮಯ್ಯ ಅವರು ಸೋಲನ್ನು ಒಪ್ಪಿಕೊಂಡ ರೀತಿ ಆಗುತ್ತದೆ ಅಲ್ಲವೆ. 2004ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಕೃಷಿ ಭೂಮಿ ಖರೀದಿಸಿದ್ದರು. ಆಗ ಅಲ್ಲಿ ಕೃಷಿ ಭೂಮಿ ಇತ್ತಾ..? 2001ರಲ್ಲಿ ಕೆಸರೆಯಲ್ಲಿ ಅಭಿವೃದ್ಧಿ ಮಾಡಿದ್ದ ಬಡಾವಣೆ ಆಗಿತ್ತು.

2004ರಲ್ಲಿ ಕೃಷಿ ಭೂಮಿ ಅಂತ ಹೇಗೆ ಖರೀದಿ ಮಾಡಿದರು. ನಿವೇಶನ ಹಂಚಿದ್ದನ್ನು ಮತ್ತೆ ವಸತಿ ಭೂಮಿ ಎಂದು ಪರಿವರ್ತನೆ ಮಾಡಿದ್ದಾರೆ. ತಮ್ಮ ತಾಯಿಗೆ ಪರಿಹಾರದ ಭೂಮಿ ಸಿಗುವಾಗ ಪ್ರಮುಖ ಸಭೆಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ಕೂತಿದ್ದರು. ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನೀಡಿರುವ 14 ಸೈಟ್ ಗಳನ್ನು ಹಿಂಪಡೆಯಬೇಕು. ಸೈಟ್ ಕೊಟ್ಟಿರುವುದು ಅಕ್ರಮ. ಅದನ್ನು ವಾಒಅಸ್ ಪಡೆಯಿರಿ ಎಂದು ಮೈಸೂರಿನಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಾಂ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!