Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ನಲ್ಲಿ ಸೇತುವೆ ದುರಂತ ನಡೆದರು ಭಯವಿಲ್ಲ.. ಶಿರಸಿಯಲ್ಲಿ ಕೆಲ ಪ್ರವಾಸಿಗರ ಕೆಲಸ ನೋಡಿ..!

Facebook
Twitter
Telegram
WhatsApp

ಉತ್ತರ ಕನ್ನಡ: ಗುಜರಾತ್ ನಲ್ಲಿ ತೂಗು ಸೇತುವೆ ದುರಂತದಿಂದ ನೂರಾರು ಜನ ಸಾವನ್ನಪ್ಪಿದ್ದಾರೆ. ಆ ಘಟನೆಗೂ ಮುನ್ನ ಒಂದಷ್ಟು ಹುಡುಗರು ಕುಣಿದು, ಹಗ್ಗವನ್ನೆಲ್ಲಾ ಜಗ್ಗಾಡಿದ್ದು ಒಂದು ಕಾರಣ ಎನ್ನಲಾಗುತ್ತಿದೆ. ಆ ದುರಂತ ಇನ್ನು ಮರೆಯಾಗಿಲ್ಲ, ಅದಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿ ಇರುವ ತೂಗು ಸೇತುವೆ ಮೇಲೆ ಕೆಲ ಪ್ರವಾಸಿಗರು ಕಾರನ್ನು ಚಲಾಯಿಸಿದ್ದಾರೆ.

ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಪ್ರವಾಸಕ್ಕೆಂದು ಬರುವವರು ಈ ಸೇತುವೆಯ ಮೇಲೆ ಹೋಗಿ, ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಂಡು ಬರುತ್ತಾರೆ. ಆದರೆ ಹೀಗೆ ಕಾರನ್ನು ತೆಗೆದುಕೊಂಡು ಹೋಗಿ, ಏನಾದರು ಅನಾಹುತವಾದರೆ ಹೊಣೆ ಯಾರು ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಜನರು ಓಡಾಡುವುದಕ್ಕೆ ಮಾತ್ರ ತೂಗು ಸೇತುವೆ ನಿರ್ಮಾಣ ಮಾಡಲಾಗಿದೆ. ಕಾರು ಚಲಿಸಿದರೆ ಜನ ಓಡಾಡುವುದಕ್ಕೂ ಸಾಧ್ಯವಾಗುವುದಿಲ್ಲ. ಜೊತೆಗೆ ವಾಹನಗಳನ್ನು ಚಲಾಯಿಸುವಷ್ಟು ತೂಗು ಸೇತುವೆ ಗಟ್ಟಿಯಾಗಿದೆಯಾ ಎಂಬುದನ್ನು ಪ್ರವಾಸಿಗರು ಹರಿತುಕೊಳ್ಳಬೇಕಾಗುತ್ತದೆ. ಸದ್ಯ ಪ್ರವಾಸಿಗರು ಕಾರನ್ನು ಕಾಳಿ ನದಿ ಸೇತುವೆ ಮೇಲೆ ಚಲಾಯಿಸಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಮತ್ತು ಅಲ್ಲಿಯೇ ಇದ್ದ ಪ್ರವಾಸಿಗರು ಬುದ್ಧಿ ಹೇಳುವುದಕ್ಕೆ ಯತ್ನಿಸಿದರು, ಕೇಳಿಲ್ಲವಂತೆ. ಅವರ ಮುಂದೆಯೇ ದುರ್ನಡತೆ ತೋರಿಸಿ ಮುಂದೆ ಸಾಗಿದ್ದಾರೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!