Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

Facebook
Twitter
Telegram
WhatsApp

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಆದರೆ ನಿನ್ನೆ ಸುರಿದ ಭಾರಿ ಮಳೆಗೆ ರೈತರ ಬೆಳೆ ನಾಶವಾಗಿದೆ.

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಯಲ್ಲಿ ರೈತರು ಬೆಳೆದಂತ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ‌. ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಈ ಘಟನೆ ನಡೆದಿದೆ. ರೈತ ಶಿವ ಪ್ರಸಾದ್ ಹಾಗೂ ಚಂದನ್ ಎಂಬುವವರ ಜಮೀನಿನಲ್ಲಿ ಬೆಳೆದ ಬೆಳೆ ನಾಶವಾಗಿದೆ. ಬೇಳೆ ತೋಟ ಸಂಪೂರ್ಣವಾಗಿ ನೆಲ ಕಚ್ಚಿದೆ.

ಅಷ್ಟೇ ಅಲ್ಲ ಬಂಗಾರಪೇಟೆಯ ಹುಣಕಲ್ ದೊಡ್ಡಿ ಗ್ರಾಮದ ಮುನಿರಾಜು ಎಂಬುವವರಿಗೆ ಸೇರಿದ ಹಾಗಲಕಾಯಿ ಹಾಗೂ ಸೋರೆಕಾಯಿ ಬೆಳೆಗೂ ಹಾನಿಯಾಗಿದೆ. ಜಿಲ್ಲೆಯಲ್ಲಿ ಹಲವು ರೈತರಿಗೆ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ. ಈ ಬಾರಿಯ ರಣ ಬಿಸಿಲಿನಲ್ಲೂ ಹಾಗೋ ಹೀಗೋ ಕಷ್ಟ ಪಟ್ಟು ಬೆಳೆ ಬೆಳೆದಿದ್ದರು. ಮಳೆ ಇಲ್ಲದೆ ಹೋದರೂ ಉಳಿಸಿಕೊಂಡಿದ್ದರು. ಆದರೆ ಮಳೆ ಬಂದು ಎಲ್ಲವನ್ನು ಹಾಳು ಮಾಡಿದೆ. ಇದು ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾಲ ಸೋಲ ಮಾಡಿದ ಬೆಳೆದ ಬೆಳೆಗೆ ನೀರಿಲ್ಲ ಅಂತ ಒದ್ದಾಡುತ್ತಿರುವಾಗ, ಕರುಣೆ ತೋರಿ ಮಳೆರಾಯ ಬಂದಿದ್ದಾನೆ. ಆದರೆ ಬಿರುಗಾಳಿ ಸಮೇತ ಬಂದು, ಎಲ್ಲವನ್ನು ಹಾನಿ ಮಾಡಿದೆ. ಇದರಿಂದ ಲಕ್ಷಾಂತರ ರೂಪಾಯಿ ಬೆಳೆಯೂ ಕೈ ಸೇರಿದೆ ಭೂಮಿ ಪಾಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!