Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವಕಪ್ ನಿಂದ ಹೊರ ಬಂದ ಮೇಲೆ ಕೊಹ್ಲಿ ಭಾವುಕ ಪೋಸ್ಟ್..!

Facebook
Twitter
Telegram
WhatsApp

ಬೆಂಗಳೂರು : ಈ ಬಾರಿಯ T20 ವಿಶ್ವಕಪ್ ‌ನಲ್ಲಿ ನಮ್ಮ ಭಾರತ ಗೆಲ್ಲಬೇಕೆಂಬುದು ಎಲ್ಲರ ಮಹದಾಸೆಯಾಗಿತ್ತು. ಆದ್ರೆ ಆ ಕನಸು ನನಸಾಗಲೇ ಇಲ್ಲ. ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ನಡೆದಿದೆ. ಇದು ಕೋಟ್ಯಾಂತರ ಭಾರತೀಯರಿಗೆ ಬೇಸರ ತರಿಸಿದ್ದಲ್ಲದೆ, ಕೊಹ್ಲಿಗೂ ಸಹಜವಾಗಿಯೇ ನೋವುಂಟಾಗಿದೆ.

ಟೀಂ ಇಂಡಿಯಾ ಸೆಮಿಫೈನಲ್ ಅನ್ನು ಪ್ರವೇಶಿಸದೆ ಹೊರಬಿದ್ದಿದೆ. ಈ ನೋವನ್ನ ಕೊಹ್ಲಿ ಬರಹದ ಮೂಲಕ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೊಹ್ಲಿ, ನಾವೂ ಒಟ್ಟಾಗಿಯೇ ನಿಂತು ಗುರಿಯನ್ನು ಸಾಧಿಸಲು ಪ್ರಯತ್ನಿಸುತ್ತೇವೆ. ದುರಾದೃಷ್ಟವಶಾತ್ ನಮಗೆ ಆ ಗುರಿಯನ್ನ ಸಾಧಿಸಲು ಆಗಲಿಲ್ಲ. ಇದು ಒಂದು ತಂಢಕ್ಕಿ.ಮತ ಹೆಚ್ಚು ನಿರಾಸೆ ಬೇರೆ ಯಾರಿಗೂ ಆಗಲ್ಲ.

ನೀವೆಲ್ಲರೂ ನಮಗೆ ಸಾಕಷ್ಟು ಬೆಂಬಲ ಕೊಟ್ಟಿದ್ದೀರಿ. ಅದಕ್ಕೆ ನಾವೂ ಕೃತಜ್ಞರಾಗಿರುತ್ತೇವೆ. ಮತ್ತೆ ಗೆಲುವಿನೆಡೆಗೆ ಹೆಜ್ಜೆ ಇಡುವುದು ನಮ್ಮ ಧ್ಯೇಯವಾಗಿದೆ. ಟೂರ್ನಿಯಿಂದ ಈ ರೀತಿ ಹೊರ ಬಂದಿದ್ದು ತಂಡಕ್ಕೂ ಅತಿ ಹೆಚ್ಚು ನಿರಾಸೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿಗೆ ಟಿ20 ನಾಯಕರಾಗಿ ಇದು ಕೊನೆಯ ಪಂದ್ಯವಾಗಿತ್ತು. ಹೀಗಾಗಿ ಈ ಟೂರ್ನಿಯಲ್ಲಿ ಗೆಲುವು ತುಂಬಾನೇ ಪ್ರಾಮುಖ್ಯತೆ ವಹಿಸಿತ್ತು. ಆದ್ರೆ ಟೀಂ ಇಂಡಿಯಾ ತಂಡ ಸೆಮಿಫೈನಲ್ ಗೂ ತಲುಪದೆ ವಾಪಾಸ್ ಆಗಿದೆ. ಇದು ಕೋಟ್ಯಾಂತರ ಭಾರತೀಯರ ಬೇಸರಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!