Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಶುರುವಾಯ್ತು ನೀರಿನ ಅಭಾವ : 19 ಗ್ರಾಮಗಳಿಗೆ ಬರದ ಛಾಯೆ..!

Facebook
Twitter
Telegram
WhatsApp

ಈ ಬಾರಿ ಜನ ಸಾಮಾನ್ಯರೆಲ್ಲಾ ಬೇಸಿಗೆ ಮುನ್ನವೇ ತತ್ತರಿಸಿ ಹೋಗುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದು. ಬರದಿಂದ ಈಗಾಗಲೇ ರೈತರು ತತ್ತರಿಸಿ ಹೋಗಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ದಾವಣಗೆರೆಯಲ್ಲಿ ಜನ ಬೇಸಿಗೆಯಿಂದ ಬೆವರುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

 

ದಾವಣಗೆರೆಯ ನೀರಿನ ಸಮಸ್ಯೆ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಎಂ ವಿ ವೆಂಕಟೇಶ್ ಅವರು, ತೀವ್ರ ಬಿಸಿಲು ಇರುವುದರಿಂದ ಮುಂದೆ ಸಮಸ್ಯೆಯಾಗಲಿರುವ 126 ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಇಲ್ಲಿ ಖಾಸಗಿ ಕೊಳವೆ ಗುರುತಿಸಿಟ್ಟುಕೊಳ್ಳಲಾಗಿದೆ. ಅವುಗಳು ಲಭ್ಯವಾಗದಿದ್ದಲ್ಲಿ ಸಮಸ್ಯೆಯಾದ 24 ಗಂಟೆಯೊಳಗೆ ಟ್ಯಾಂಕರ್ ಗಳ ಮೂಲಕ ನೀರು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್ ತಿಂಗಳಲ್ಲಿ ಶೇಕಡ 90% ಮಳೆ‌ ಕೊರತೆ ಎದುರಿಸಲಾಗಿದೆ.ಇದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದಿದ್ದಾರೆ.

 

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇರುವುದಿಲ್ಲ. ಭದ್ರಾ ಜಲಾಶಯದ ಮೂಲಕ ತುಂಗಾ ಭದ್ರಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಪೂರೈಕೆಯಾಗಲಿದೆ. ಶಾಂತಿ ಸಾಗರದಿಂದ ಹಲವು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿದೆ. ಕಾಲುವೆ ಮೂಲಕ ಶಾಂತಿಸಾಗರಕ್ಕೆ ಬಿಡಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೆ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್ ಸೆಟ್‌ಗಳ ತೆರವಿಗೂ ತಂಡ ರಚಿಸಲಾಗಿದೆ. ಸಮಸ್ಯೆಗಳು ಎದುರಾದರೆ ಅಲ್ಲಿ 144 ಸೆಕ್ಷನ್ ಜಾರಿಗೊಳಿಸಲು ತಹಶಿಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ‌ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!