Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀಕೆಂಡ್ ವಿತ್ ರಮೇಶ್ ರಮ್ಯಾ ಎಪಿಸೋಡ್ : ಫುಲ್ ಟ್ರೋಲ್ ಗೆ ಕಾರಣವಾಯ್ತು ಇಂಗ್ಲಿಷ್ ಟಾಕ್..!

Facebook
Twitter
Telegram
WhatsApp

ವೀಕೆಂಡ್ ವಿತ್ ರಮೇಶ್ ಸೀಸನ್ 5 ಶುರಿವಾಗಿದೆ. ಮೊದಲ ಅತಿಥಿಯಾಗಿ ನಟಿ ರಮ್ಯಾ ಬಂದಿದ್ದಾರೆ. ಹಲವು ಸ್ವಾರಸ್ಯಕರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಮ್ಯಾ ಎಪಿಸೋಡ್ ಗೆ ಸಾಕಷ್ಟು ಪಾಸಿಟಿವ್ ಅಂಡ್ ನೆಗೆಟಿವ್ ಕಮೆಂಟ್ಸ್ ಗಳು ಹೊರ ಬಂದಿದೆ.

ಸಂಚಿಕೆ ಪ್ರಸಾರಕ್ಕೂ ಮುನ್ನವೇ ಜೀ ಕನ್ನಡ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಅವರ ಪ್ರೋಮೋಗಳನ್ನು ಬಿಡಲಾಗಿತ್ತು. ಈ ಪ್ರೋಮೋಗಳು ನಿರೀಕ್ಷೆಯನ್ನು ಹೆಚ್ಚಿಸಿದ್ದವು. ಅಷ್ಟೇ ಹೆಚ್ಚಾಗಿ ಟ್ರೋಲ್ ಗೂ ಗುರಿಯಾಗಿಸಿತ್ತು. ಇಷ್ಟು ವರ್ಷ ಚಿತ್ರರಂಗದಿಂದ ದೂರ ಉಳಿದಿದ್ದ ರಮ್ಯಾ, ರಾಜಕೀಯ ರಂಗವನ್ನು ನೋಡಿ ಬಂದಿದ್ದರು. ಎಲ್ಲದರ ಅನುಭವವನ್ನು ಸಾಧಕರ ಖುರ್ಚಿ ಮೇಲೆ ಕೂತು ಹಂಚಿಕೊಳ್ಳುತ್ತಾರೆ ಎಂದು ಮನೆ ಮಂದಿಯೆಲ್ಲಾ ಕುಳಿತು ನೋಡುವಾಗ ನೋಡುಗರಿಗೆ ಅದು ಶಾಕ್ ತರಿಸಿತ್ತು.

ನಟಿ ರಮ್ಯಾ ಕಾರ್ಯಕ್ರಮದಲ್ಲಿ ಕನ್ನಡಕ್ಕಿಂತ ಹೆಚ್ಚು ಮಾತನಾಡಿದ್ದು ಇಂಗ್ಲಿಷ್ ಭಾಷೆಯನ್ನೇ ಹೀಗಾಗಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ರಾಘವೇಂದ್ರ ಹುಣಸೂರ್ ಅವರಿಗೆ ಟ್ಯಾಗ್ ಮಾಡುತ್ತಾ, ಇದೇನೂ ಇಂಗ್ಲೀಷ್ ಪ್ರೋಗ್ರಾಂ ಹ, ಕಂಗ್ಲೀಷ್ ಪ್ರೋಗ್ರಾಂ ಹ ಅಂತ ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಮುಂದೆ ಹೋಗಿ ರಶ್ಮಿಕಾ ಹಾಗೂ ರಮ್ಯಾ ಅವರನ್ನು ಹೋಲಿಕೆ ಮಾಡುತ್ತಿದ್ದಾರೆ. ಅವರು ತತ್ಸಮ ಆದ್ರೆ ಇವರು ತದ್ಭವ ಎಂದು ಟ್ರೋಲ್ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!