Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಯನಿರತ ಪತ್ರಕರ್ತರ ಸಂಘ: ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.07) :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ ಮಾಡಲಾಗಿದೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಅವರು ಅರ್ಹ ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಿ ಮಾತನಾಡಿ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿಗೆ ಚುನಾವಣೆಯನ್ನು ಘೋಷಣೆ ಮಾಡಿ ವೇಳಾಪಟ್ಟಿಯನ್ನು ಪ್ರಕಟಮಾಡಲಾಗಿದ್ದು, ಚುನಾವಣಾಧಿಕಾರಿಗಳ ಕಚೇರಿ ವೇಳೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಕಾರ್ಯನಿರ್ವಹಿಸಲಿದೆ ಎಂದರು.

ಫೆ.09 ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಫೆ.11 ಮಧ್ಯಾಹ್ನ 12ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಫೆ.14ರಂದು ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.

ಫೆ.16 ಮಧ್ಯಾಹ್ನ 1 ಗಂಟೆಯ ನಂತರ ನಾಮಪತ್ರಗಳ ಪರಿಶೀಲನೆ ಹಾಗೂ ಕ್ರಮಬದ್ಧ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಮಾಡಲಾಗುವುದು.

ಫೆ.19ರಂದು ಮಧ್ಯಾಹ್ನ 1 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಮಾಡಲಾಗುವುದು.

ಫೆ.27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಗತ್ಯ ಬಿದ್ದಲ್ಲಿ ಚುನಾವಣೆ ನಡೆಯಲಿದೆ.

ಫೆ.27ರಂದು ಮಧ್ಯಾಹ್ನ 3 ಗಂಟೆಯ ನಂತರ ಮತಗಳ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.

ಫೆ.28ರಂದು ಸೋಮವಾರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!