Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್‌ 27ರಂದು ವಿಶ್ವ ರಂಗಭೂಮಿ ದಿನಾಚರಣೆ

Facebook
Twitter
Telegram
WhatsApp

 

ಚಿತ್ರದುರ್ಗ : ರಂಗಸೌರಭ ಕಲಾ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ -2023 ಕಾರ್ಯಕ್ರಮವನ್ನು ಮಾರ್ಚ್ 27ರಂದು ಬೆಳಿಗ್ಗೆ 10-30ಕ್ಕೆ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ.

ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಜಿ.ಎಸ್.ಉಜ್ಜಿನಪ್ಪ ಉದ್ಘಾಟಿಸುವರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಸರ್ಕಾರಿ ಕಲಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಜಿ.ಎನ್.ಯಶೋಧರ ಶಿಕ್ಷಣದಲ್ಲಿ ರಂಗಭೂಮಿಯ ಪ್ರಸ್ತುತತೆ ವಿಷಯವಾಗಿ ಉಪನ್ಯಾಸ ನೀಡುವರು. ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಶಸಾಪ ಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್ ಮುಖ್ಯಅತಿಥಿಯಾಗಿ ಉಪಸ್ಥಿತರಿರುವರು.

ರಂಗ ನಿರ್ದೇಶಕ ಕೆಪಿಎಂ. ಗಣೇಶಯ್ಯ 2023ರ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಈಜಿಪ್ಟ್ ದೇಶದ ವಿಶ್ವವಿಖ್ಯಾತ ಅಭಿನೇತ್ರಿ ಸಮಿಹಾ ಅಯೌಬ್ ವಿರಚಿತ ರಂಗಸಂದೇಶವನ್ನು ವಾಚಿಸುವರು.

ರಂಗಸೌರಭ ಕಲಾವಿದರು ರಂಗ ಜಂಗಮ ಬಿ.ವಿ ಕಾರಂತ, ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಹಿರಿಯ ನಾಟಕಕಾರ ಚಂದ್ರಶೇಖರ ಕಂಬಾರ ಮುಂತಾದ ನಾಟಕಕಾರರ ಹಾಗೂ ಹೆಸರಾಂತ ನಿರ್ದೇಶಕರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಗೀತೆಗಳನ್ನು ಹಾಡುವರು.

ರಂಗಭೂಮಿ ಕಲಾವಿದರಾದ ಎಂ.ಕೆ.ಹರೀಶ್, ಪ್ರಕಾಶ್ ಬಾದರದಿನ್ನಿ, ಗಾಯಕ ಕಾಲ್ಕೆರೆ ಚಂದ್ರಪ್ಪ, ವಕೀಲ ಎಸ್.ವಿಜಯ್‍ಕುಮಾರ್, ಶ್ರೀನಿವಾಸ್‍ಮೂರ್ತಿ, ಮಧು.ಟಿ, ಶ್ರೀಕುಮಾರ್.ಡಿ, ನಾಗೇಂದ್ರಪ್ಪ, ಕಾನಾಮಡುಗು ಕರಿಯಣ್ಣ, ಗಾಯಕ ಡಿ.ಓ.ಮುರಾರ್ಜಿ, ನನ್ನಿವಾಳ ಹನುಮಂತಪ್ಪ, ಸಾಹಿತಿ ಹುರುಳಿ ಬಸವರಾಜ್, ಎಂ.ಆರ್.ದಾಸೇಗೌಡ, ಯಲ್ಲಪ್ಪ ಐಹೊಳೆ, ಚನ್ನಬಸಪ್ಪ, ಹಿರಿಯೂರು ಮಹಾಲಿಂಗಯ್ಯ, ಗಾಯಕರಾದ ಗಂಗಾಧರ.ಕೆ, ಮೆದೇಹಳ್ಳಿ ಅಂಜಿನಪ್ಪ, ಹಿಮಂತರಾಜು ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ಕಾರ್ಯದರ್ಶಿ ಕೆಪಿಎಂ ಗಣೇಶಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!