Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಸ್ತಿಪಟು ವಿನೇಶ್ ಪೋಗಟ್ ಗೆ ಹರಿಯಾಣ ಚುನಾವಣೆಯಲ್ಲಿ ಭರ್ಜರಿ ಗೆಲುವು..!

Facebook
Twitter
Telegram
WhatsApp

 

ವಿನೇಶ್ ಪೋಗಟ್ ಎಂದಾಕ್ಷಣ ಒಲಂಪಿಕ್ ನಲ್ಲಿ ನಡೆದ ಅವಾಂತರವೇ ತಕ್ಷಣಕ್ಕೆ ಕಣ್ಣ ಮುಂದೆ ಬರುತ್ತದೆ. ಚಿನ್ನದ ಪದಕಕ್ಕೆ ಮುತ್ತಿಡಬೇಕಾಗಿದ್ದ ವಿನೇಶ್ ಪೋಗಟ್ ಕೇವಲ 100 ಗ್ರಾಂ ಜಾಸ್ತಿಯಾಗಿದ್ದಕ್ಕೆ ರಿಜೆಕ್ಟ್ ಆಗಿದ್ದರು. ಹಾಗೇ ಕುಸ್ತಿಗೆ ವಿದಾಯವನ್ನು ಘೋಷಿಸಿದರು. ಇದರ ಬೆನ್ನಲ್ಲೇ ಚುನಾವಣೆಯಲ್ಲಿ ಸ್ಪರ್ಧಿಸಿದ ವಿನೇಶ್ ಪೋಗಟ್ ಭರ್ಜರಿ ಗೆಲುವು ಕಂಡಿದ್ದಾರೆ.

ಇಂದು ಹರಿಯಾಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಹರಿಯಾಟದಲ್ಲಿ ವಿನೇಶ್ ಪೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೂಲಾನ ಕ್ಷೇತ್ರದಿಂದ ವಿನೇಶ್ ಪೋಗಟ್ ಸ್ಪರ್ಧೆ ಮಾಡಿದ್ದರು. 11 ನೇ ಸುತ್ತಿನ ಮತ ಎಣಿಕೆಯಲ್ಲೂ ವಿನೇಶ್ ಪೋಗಟ್ 50,617 ಮತಗಳನ್ನು ಪಡೆದಿದ್ದಾರೆ. ಎದುರಾಳಿಯ ವಿರುದ್ಧ 6,050 ಮತಗಳ ಅಂತರದಲ್ಲಿದ್ದಾರೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ‌. ಬಹುತೇಕ ವಿನೇಶ್ ಪೋಗಟ್ ಗೆಲ್ಲುವುದು ಖಚಿತವಾಗಿದೆ ಇನ್ನೇನಿದ್ದರೂ ಘೋಷಣೆಯೊಂದೆ ಬಾಕಿ ಇದೆ.

ಇನ್ನೂ ವಿನೇಶ್ ಪೋಗಟ್ ಒಲಂಪಿಕ್ಸ್ ನಲ್ಲಿ ಹೊರಗೆ ಬಂದ ಬಳಿಕ ಸಾಕಷ್ಟು ಕಣ್ಣೀರು ಹಾಕಿದರು. ಕೂದಲೆಳೆ ಅಂತರದಲ್ಲಿ ಈ ರೀತಿಯಲ್ಲಿ ರಿಜೆಕ್ಟ್ ಆದರೆ ಯಾರಿಗೆ ತಾನೇ ನೋವಾಗಲ್ಲ ಹೇಳಿ. ಅಂದೇ ಮತ್ತೆ ಕುಸ್ತಿ ಆಡಲ್ಲ ಎಂದು ನಿರ್ಧಾರ ಕೂಡ ಮಾಡಿದರು. ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತೇನೆ. ನಾನು ಅನುಭವಿಸಿದ್ದನ್ನು ಇನ್ಯಾವ ಕ್ರೀಡಾಪಟು ಅನುಭವಿಸಬಾರದು ಅಂತ ಹೇಳಿದ್ದರು. ಆರಂಭದಿಂದಾನೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಹೋರಾಟ ಮಾಡಿದರು. ಲೈಂಗಿಕ ಕಿರುಕುಳದ ಆರೋಪವಿದ್ದರು, ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲದ ಕಾರಣಕ್ಕೂ ವೀನೇಶ್ ಪೋಗಟ್ ಬೇಸರ ಮಾಡಿಕೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಜಗದೀಶ್ ಕ್ಷಮೆಯಾಚನೆ : ಯಾಕೆ ಗೊತ್ತಾ..?

  ಬೆಂಗಳೂರು : ಕಳೆದ ಸೀಸನ್ ನಿಂದ ಬಿಗ್ ಬಾಸ್ ರೀತಿ ನೀತಿಯೇ ಬದಲಾಗಿದೆ‌. ಮೊದಲೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಭಾವನೆಗಳಿಗೂ ಜಾಗ ಇರುತ್ತಾ ಇತ್ತು. ಆದರೆ ಈಗ ಓನ್ಲಿ ಸ್ಪರ್ಧೆ. ಗೆಲ್ಬೇಕು

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

error: Content is protected !!