ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಮೇ 16ರ ವರೆಗೂ ಧಾರಾಕಾರ ಮಳೆ ಸುರಿಯುವ ಸೂಚನೆಯನ್ನು ನೀಡಿದೆ. ಮುಂದಿನ ಆರು ದಿನಗಳ ಕಾಲ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಭರ್ಜರಿ ಮಳೆಯಾಗಲಿದೆ. ಮಂಡ್ಯ, ಮೈಸೂರು, ಹಾಸನ, ಬೆಳಗಾವಿ, ಹಾವೇರಿ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗಲಿದೆ.
ರಾಯಚೂರು, ಯಾದಗಿರಿ, ಕೊಪ್ಪಳ, ಧಾರವಾಡ, ಕಲಬುರಗಿ, ಬೀದರ್, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ವರದಿಯ ಪ್ರಕಾರ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಜೋರು ಮಳೆಯಾಗುವ ನಿರೀಕ್ಷೆ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












