Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅವಳನ್ನು ಮುಟ್ಟಿದ್ರೆ ನನ್ನ ತಾಯಿಯನ್ನು ಮುಟ್ಟಿದಂತೆ : ಅತ್ಯಾಚಾರ ಆರೋಪಕ್ಕೆ ವಿನಯ್ ಕುಲಕರ್ಣಿ ಹೇಳಿದ್ದೇನು..?

---Advertisement---

ಬೆಂಗಳೂರು: ಶಾಸಕ ವಿನಯ್ ಕುಲರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ ಶಾಸಕ ವಿನಯ್ ಕುಲಕರ್ಣಿ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ಸಂಚು ರೂಪಿಸಿ, ಮಾನಹಾನಿ ಮಾಡಿದ್ದಾರೆ. ರಾಜಕೀಯ ನಾಯಕರಿಗೂ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿರುವ ಶಾಸಕ ವಿನಯ್ ಕುಲಕರ್ಣಿ, ನಾನು ಆಕೆಯನ್ನು ಟಚ್ ಮಾಡಿದರೆ ನನ್ನ ತಾಯಿಯನ್ನು ಟಚ್ ಮಾಡಿದಂತೆ. ಇಷ್ಟೇ ಹೇಳುತ್ತೇನೆ. ನನ್ನ ವಿರುದ್ಧ ಮಹಿಳೆಯೊಬ್ಬರು ಕಿರುಕುಳ ಆರೋಪ ಹೊರಿಸಿದ್ದಾರೆ. ಈ ವಿಚಾರ ಏನಂದ್ರೆ ಒಂದು ವಿಡಿಯೋ ಕಾಲ್ ಮಾಡಿದ್ದು. ಆ ವಿಚಾರ ಇಟ್ಟುಕೊಂಡು ಇಷ್ಟೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದೆಲ್ಲ ಸತ್ಯಕ್ಕೆ ದೂರವಾಗಿದೆ. ನಾನು ರಾಜಕೀಯದಲ್ಲಿ ಇಷ್ಟು ವರ್ಷ ಇದ್ದೇನೆ. ಆದರೆ ಯಾರ ಜೊತೆಗೂ ನಾನು ಕೆಟ್ಟದಾಗಿ ನಡೆದುಕೊಂಡಿಲ್ಲ.

ಕೆಲವು‌ ಮಂದಿ ಹಿಂದೆಯಿಂದ ಮಾಡಿಸುತ್ತಿರಬಹುದು. ನನ್ನದೂ ಒಂದು ಕೇಸ್ ಇದೆ. ಸಾಕ್ಷಿಗಳ ಮೇಲೆ ಇಂಪ್ಯಾಕ್ಟ್ ಮಾಡಿಸುವ ಷಡ್ಯಂತ್ರವಿದು. ನಾನಂತು ಈ ವಿಚಾರದಲ್ಲಿ ಸ್ಪಷ್ಟವಾಗಿದ್ದೇನೆ. ಇದರಲ್ಲಿ ನನ್ನದೇನು ಪಾತ್ರವಿಲ್ಲ. ನಾನೂ ಕೂಡ ದೂರು ಕೊಟ್ಟಿದ್ದೇನೆ. ಈ ಬಗ್ಗೆ ತನಿಖೆ ಆಗಲಿ, ಸತ್ಯಾಸತ್ಯತೆ ಹೊರ ಬರಲಿ ಎಂದಿದ್ದಾರೆ.

ಇದೀಗ ವಿನಯ್ ಕುಲಕರ್ಣಿ ಪ್ರತಿ ದೂರಿನ ಮೇರೆಗೆ ಸಂಜಯನಗರ ಪೊಲೀಸರು, ಕನ್ನಡ ಸುದ್ದಿ ವಾಹಿನಿ ಮಾಲೀಕ ಹಾಗೂ ರೈತ ಮಹಿಳೆಯ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕನೆ ಎ1 ಆರೋಪಿಯಾಗಿದ್ದು, ರೈತ ಮಹಿಳೆ ಎ2 ಆರೋಪಿಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment