ಸಿದ್ದರಾಮೋತ್ಸವಕ್ಕೆ ಆಗಮಿಸುವಾಗ ರಾಹುಲ್ ಗಾಂಧಿಗೆ ತಟ್ಟಿದ ಟ್ರಾಫಿಕ್ ಜಾಮ್..!

1 Min Read

ದಾವಣಗೆರೆ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬ. ಇಂದು ಸಿದ್ದರಾಮೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಬೃಹತ್ ವೇದಿಕೆ ಮೇಲೆ ಸಿದ್ದರಾಮೋತ್ಸವ ಆಚರಣೆ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಈಗಾಗಲೇ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ರಾಹುಲ್ ಗಾಂಧಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಟ್ರಾಫಿಕ್ ಕಿರಿಕಿರಿ ಉಂಟಾಗಿದೆ.

 

ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನವೇ ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಮುರುಘಾ ಮಠಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಶ್ರೀಗಳು ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ ಮಾಡಿದ್ದಾರೆ. ಇನ್ನು ರಾಹುಲ್ ಗಾಂಧಿ ಮತ್ತು ಡಿಕೆ ಶಿವಕುಮಾರ್ ಮುರುಘಾ ಮಠದಿಂದ ಹೊರಟಿದ್ದು, ದಾರಿ ನಡುವೆ ಟ್ರಾಫಿಕ್ ಕಿರಿಕಿರಿ ಉಂಟಾಗಿದೆ.

ದಾವಣಗೆರೆ-ಆನನಗೋಡು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ರಾಹುಲ್ ಗಾಂಧಿ ಇದೀಗ ಮಾರ್ಗ ಬದಲಿಸಿದ್ದಾರೆ. ಈಗಿರುವ ಮಾರ್ಗ ಬಿಟ್ಟು ಬನ್ನಿಕೋಡು ಮಾರ್ಗದಿಂದ ರಾಹುಲ್ ಗಾಂಧಿ‌ ಮತ್ತು ಡಿಕೆ ಶಿವಕುಮಾರ್ ಹೊರಟಿದ್ದಾರೆ. ಈಗಾಗಲೇ ಸಿದ್ದರಾಮೋತ್ಸವದಲ್ಲಿ ಜನಸಾಗರ ಸೇರಿದ್ದು, ರಾಹುಲ್ ಗಾಂಧಿ ಸೇರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *