ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬಂಗಾಳಿ ಚಿತ್ರರಂಗದ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತದಲ್ಲಿ ಇಂದು ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಒಡಿಶಾದ ತಲ್ಸಾರಿ ಬೀಚ್ನಲ್ಲಿ ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವರು ಸಮುದ್ರದ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳದಲ್ಲಿದ್ದ ತಂತ್ರಜ್ಞರು ರಾಹುಲ್ ಅವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
“ಭೋಲೆ ಬಾಬಾ ಪಾರ್ ಕರೇಗಾ” ಧಾರಾವಾಹಿಯ ಚಿತ್ರೀಕರಣದ ವೇಳೆ ಭಾನುವಾರ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 43ನೇ ವಯಸ್ಸಿನಲ್ಲಿಯೇ ನಟನ ಅಕಾಲಿಕ ನಿಧನ ಚಿತ್ರರಂಗಕ್ಕೆ ಭಾರೀ ಆಘಾತ ಉಂಟುಮಾಡಿದೆ.ರಾಹುಲ್ ಬ್ಯಾನರ್ಜಿ ಅವರು 2008ರಲ್ಲಿ ಬಿಡುಗಡೆಯಾದ ‘ಚಿರೋದಿನಿ ತುಮಿ ಜೆ ಅಮರ್’ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದರು. ಬಳಿಕ ಹಲವು ಬಂಗಾಳಿ ಸಿನಿಮಾಗಳು, ಟಿವಿ ಕಾರ್ಯಕ್ರಮಗಳು ಹಾಗೂ ವೆಬ್ ಸರಣಿಗಳಲ್ಲಿ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದರು.
ವೈಯಕ್ತಿಕ ಜೀವನದಲ್ಲಿ, ಅವರು ನಟಿ ಪ್ರಿಯಾಂಕಾ ಸರ್ಕಾರ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಶೋಹೋಜ್ ಎಂಬ ಮಗನಿದ್ದು, ಕೆಲ ವರ್ಷಗಳ ಹಿಂದೆ ಬೇರ್ಪಟ್ಟಿದ್ದರೂ, ಮಗನ ಪಾಲನೆಗಾಗಿ ಸಹಪೋಷಕರಾಗಿ ಮುಂದುವರಿದಿದ್ದರು.
ನಟನ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್