ಹಾಸನದಲ್ಲಿ ನಾಲ್ವರು ಬೀದಿ ಬದಿ ವ್ಯಾಪಾರಿಗಳ ದುರಂತ ಅಂತ್ಯ ; ಅಂಥದ್ದೇನಾಯ್ತು..?

ಹಾಸನ; ಜೀವನ ನಡೆಸಲೆಂದು ಬೀದಿ ಬದಿಯಲ್ಲಿ ವ್ಯಾಪಾರ ಮಾಡಿಕೊಂಡು, ಅದರಿಂದ ಬಂದ ಹಣದಿಂದ ತಮ್ಮ ಜೀವನವನ್ನ ನಡೆಸುತ್ತಿದ್ದರು ಆದರೆ ಆ ಬದುಕೆ ಇಂದು ಅಂತ್ಯವಾಗಿದೆ. ಹಾಸನದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ದೊಡ್ಡ ದುರಂತ ನಡೆದಿದ್ದು, ಎಂದಿನಂತೆ ವ್ಯಾಪಾರ ಮಾಡುತ್ತಿದ್ದವರು ದುರಂತ ಅಂತ್ಯ ಕಂಡಿದ್ದಾರೆ. ಇಂದು ಕೂಡ ತಮ್ಮ ವ್ಯಾಪಾರ ಮಾಡಲು ಐಟಂ ತಂದು ಕೂತಿದ್ದರು. ಇದೇ ವೇಳೆ ಕಟ್ಟಡ ಕುಸಿದಿದೆ. ಇದರಿಂದ ಬದುಕೇ ಅಂತ್ಯವಾಗಿದೆ. ಕಟ್ಟಡ ಕುಸಿದು ನಾಲ್ಕು ಜನ ಸಾವನ್ನಪ್ಪಿದ್ದು, ಇನ್ನು ಹಲವರು ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಮೃತರಾದವರಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಾಗಿದ್ದಾರೆ.

ಕಟ್ಟಡ ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಕೂಡ ಬರದಿಂದ ಸಾಗುತ್ತಿದೆ. ಅವಶೇಷಗಳಡಿಯಲ್ಲಿ ಯಾರಾದ್ರೂ ಸಿಲುಕಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಹುಡುಕಾಟ ಶುರುವಾಗಿದೆ.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

5 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

2 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago