Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರಶಿಕ್ಷಣಾರ್ಥಿಗಳು ನಟನಾ ಕೌಶಲ್ಯ ಅರಿತಿರಬೇಕು : ಮೈಸೂರು ರಮಾನಂದ

---Advertisement---

ಚಿತ್ರದುರ್ಗ: (ಜ.25) : ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಸ್ತಕದಲ್ಲಿ ಸಂಗ್ರಹಿಸಿದ ವಿಷಯಗಳು ಪಾಠ ಬೋಧನೆಗೆ ಸಹಕಾರಿಯಾಗುತ್ತವೆ. ಪಠ್ಯಾಧಾರಿತ ವಸ್ತುಗಳಿಗೆ ಪಠ್ಯೇತರ ಚಟುವಟಿಕೆಗಳು ಪೂರಕವಾಗಿರಬೇಕು ಎಂದು ಚಲನಚಿತ್ರ ಹಾಸ್ಯನಟ ಹಾಗೂ ನಾಟಕಕಾರ ಮೈಸೂರು ರಮಾನಂದ ಅಭಿಪ್ರಾಯಪಟ್ಟರು.

ನಗರದ ಶ್ರೀರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ರಂಗಸೌರಭ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಗೆಜ್ಜೆಹೆಜ್ಜೆ ರಂಗತಂಡ ಸಂಯುಕ್ತ ಆಶ್ರಯದಲ್ಲಿ ರಂಗಸೌರಭ ರಂಗೋತ್ಸವ-23 ಅಂಗವಾಗಿ ರಂಗ ಉಪನ್ಯಾಸ, ಗೀತಗಾಯನ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಪಾಠ ಮಾಡುವ ಪ್ರಶಿಕ್ಷಣಾರ್ಥಿಗಳು ಆಂಗಿಕ ಮತ್ತು ವಾಚಿಕ ಅಭಿನಯಗಳನ್ನು ತಿಳಿದಿರಬೇಕು. ಉತ್ತಮ ದೇಹದ ನಿಲುವು, ಸ್ಪಷ್ಟಮಾತು ನಿರರ್ಗಳವಾಗಿರಬೇಕು. ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಉತ್ತಮ ಶಿಕ್ಷಕರಾಬಹುದು ಎಂದರು.

ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾಧ್ಯಕ್ಷ ಮಾಲತೇಶ್ ಅರಸ್ ಹರ್ತಿಕೋಟೆ ಇವರು ಶಿಕ್ಷಣದಲ್ಲಿ ಸಾಂಸ್ಕೃತಿಕ ವಿಷಯವಾಗಿ ಉಪನ್ಯಾಸ ನೀಡಿ ಮಾತನಾಡುತ್ತ ಯಾವುದೇ ಜಾತಿ, ಧರ್ಮದ ಸೋಂಕಿಲ್ಲದ ರಂಗಭೂಮಿಗೆ ಎಲ್ಲರನ್ನೂ ಒಟ್ಟುಗೂಡಿಸುವ ಶಕ್ತಿಯಿದೆ.

ಸಾಂಸ್ಕೃತಿಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳ ಸೊತ್ತಾಗಬೇಕು. ಗ್ರಾಮೀಣ ಕ್ರೀಡೆಗಳು ಮಕ್ಕಳ ಕಲಿಕೆಗೆ ಆಸಕ್ತಿ ಮೂಡಿಸುತ್ತವೆ. ಮರೆಯಾಗುತ್ತಿರುವ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡಬೇಕಿದೆ. ದೇಸೀತನದ ಸಂಸ್ಕೃತಿಯನ್ನು ಮೈಗೂಡಿಸಿಕೊಂಡರೆ ಕಲಿಕೆಯ ಸಾಮಥ್ರ್ಯ ಗುಣಾತ್ಮಕವಾಗಿರುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಮಾತನಾಡಿ ನಾಡಿನ ಕಲೆ ಮತ್ತು ಸಂಸ್ಕøತಿಗಾಗಿ ಇಲಾಖೆ ಅನೇಕ ಕಾರ್ಯಕ್ರಮಗಳನ್ನು  ಉಪಪ್ರಾಚಾರ್ಯ ಡಾ.ಮೋಹನ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ರಂಗನಿರ್ದೇಶಕ ಕೆಪಿಎಂ.ಗಣೇಶಯ್ಯ, ಉಪನ್ಯಾಸಕರಾದ ಬಿ.ಎಸ್.ನಟರಾಜ, ಮಹಾಂತೇಶ್.ಈ, ಹೇಮಲತ.ಬಿ, ಸ್ವಾತಿ.ಎಂ, ಹಿರಿಯ ಕಲಾವಿದ ಎಂ.ಕೆ.ಹರೀಶ್, ಬಾದರದಿನ್ನಿ ಆಟ್ರ್ಸ್ ಅಕಾಡೆಮಿ  ಪ್ರಕಾಶ್‍ಬಾದರದಿನ್ನಿ ಮುಂತಾದವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.

ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದವರಿಂದ ಕಂಡಕ್ಟರ್ ಗಂಗರಾಜು ವಿರಚಿತ ರಂಗಯ್ಯನ ರಾದ್ಧಾಂತ ನಾಟಕ ಪ್ರದರ್ಶನ ನೀಡಿದರು. ರಂಗಸೌರಭ ಕಲಾವಿದರು ಗೀತಗಾಯನ ಕಾರ್ಯಕ್ರಮದಲ್ಲಿ ಗೀಗೀ ಪದ, ಲಾವಣಿ, ಕೋಲಾಟದ ಪದ ಹಾಗೂ ಜನಪದಗಳನ್ನು ಹಾಡಿ ಪ್ರಶಿಕ್ಷಣಾರ್ಥಿಗಳನ್ನು ರಂಜಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...