ಕಾನೂನುಗಳ ನಿಖರ ಅನುಷ್ಠಾನಕ್ಕಾಗಿ ತರಬೇತಿ ಅವಶ್ಯ : ನ್ಯಾಯಾಧೀಶ ರೋಣ ವಾಸುದೇವ್

 

 

ಚಿತ್ರದುರ್ಗ. ಮಾ.13 : ಹೊಸ ಕಾನೂನುಗಳನ್ನು ಜಾರಿಗೆ ತಂದಾಗ, ಅಥವಾ ಹಿಂದೆ ಇದ್ದಂತಹ ಕಾನೂನುಗಳನ್ನು ಮಾರ್ಪಾಡು ಮಾಡಿದ ಸಂದರ್ಭದಲ್ಲಿ ಹೊಸ ವಿಚಾರ, ಕಾನೂನು ತಿಳಿದುಕೊಂಡು ಅತ್ಯಂತ ನಿಖರವಾಗಿ ಅನುಷ್ಠಾನ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಹಾಗಾಗಿ ತರಬೇತಿ ಕಾರ್ಯಾಗಾರಗಳು ಅವಶ್ಯವಾಗಿ ಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ರೋಣ ವಾಸುದೇವ್ ಹೇಳಿದರು.

ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ (ಡಯಟ್) ಗುರುವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ  ವತಿಯಿಂದ ಬಾಲ ನ್ಯಾಯ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸ್ನೇಹಿ ಕಾನೂನು ಸೇವೆಗಳ ಯೋಜನೆ ಕುರಿತು ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸ ಹೊಸ ಕಾನೂನು, ವಿಷಯಗಳನ್ನು ತಿಳಿದುಕೊಳ್ಳಲು, ನಾವು ಮಾಡುತ್ತಿರುವ ಕರ್ತವ್ಯಗಳನ್ನು ಮತ್ತಷ್ಟು ಜಾಗರೂಕತೆ ಹಾಗೂ ಹೆಚ್ಚಿನ ಮುತುವರ್ಜಿಯಿಂದ ಮಾಡುವ ಉದ್ದೇಶದಿಂದ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

1996ರ ಬಾಲ ನ್ಯಾಯ ಕಾಯ್ದೆಯಲ್ಲಿ 7 ಅಧ್ಯಾಯಗಳು ಹಾಗೂ 63 ಸೆಕ್ಷನ್‍ಗಳು ಇದ್ದವು. 2000ನೇ ಇಸವಿಯಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಲ್ಲಿ 5 ಅಧ್ಯಾಯಗಳು ಹಾಗೂ 70 ಸೆಕ್ಷನ್‍ಗಳನ್ನು ಅಳವಡಿಸಿಲಾಯಿತು. ತದನಂತರ ಬಾಲ ನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ 2015ರಲ್ಲಿ ಹಿಂದೆ ಇದ್ದ ಎರಡು ಕಾನೂನುಗಳಿಗಿಂತ ವಿಭಿನ್ನವಾಗಿ 10 ಅಧ್ಯಾಯಗಳು ಹಾಗೂ 112 ಸೆಕ್ಷನ್‍ಗಳನ್ನು ಅಳವಡಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಮಗುವಿಗೂ ಮೊಬೈಲ್, ಇಂಟರ್‍ನೆಟ್ ದೊರೆಯುತ್ತಿದ್ದು, ಮಕ್ಕಳು ಸಾಮಾಜಿಕ ತಾಣಗಳನ್ನು ಬಳಸುತ್ತಿದ್ದಾರೆ. ಇದರಿಂದ ಮಕ್ಕಳು ಮಾನಸಿಕವಾಗಿ ಯಾವ ರೀತಿಯಾಗಿ ಬೆಳೆಯಬೇಕಿತ್ತೋ ಆ ರೀತಿ ಬೆಳೆಯದೇ ಇನ್ನೊಂದು ದಿಕ್ಕಿನಲ್ಲಿ ಬೆಳೆಯುತ್ತಿದ್ದಾರೆ. ಇದರಿಂದ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಬೆಳವಣಿಗೆ, ನಡತೆ, ನುಡಿಯಲ್ಲಿ ಬಹಳಷ್ಟು ವ್ಯತ್ಯಾಸ ಕಾಣುತ್ತಿದ್ದೇವೆ. ಮಕ್ಕಳು ಅಪರಾಧ ಕಡೆಗೆ ಅವರ ಮನಸ್ಸು ಹೋಗುತ್ತಿದೆ. ಮಕ್ಕಳನ್ನು ಬಳಸಿಕೊಂಡು ಅಪರಾಧವೆಸಗುವ ಚಟುವಟಿಕೆಗಳನ್ನು ಕಾಣುತ್ತಿದ್ದು, ಹಾಗಾಗಿ ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲೆ ಹೆಚ್ಚಿದೆ. ಮಕ್ಕಳು  ಮುಖ್ಯವಾಹಿನಿಯಿಂದ ಆಚೆ-ಈಚೆ ಹೋಗಬಾರದು ಕಾನೂನು ಸುವ್ಯವಸ್ಥೆ ಜೊತೆಗೆ  ಇದನ್ನು ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಬಾಲ ನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಸ್ನೇಹಿ ಕಾನೂನು ಸೇವೆಗಳು ಸೇರಿದಂತೆ ಈ ಎಲ್ಲ ಕಾನೂನುಗಳು ಮಕ್ಕಳನ್ನು ಶಿಕ್ಷಿಸುವ, ದಂಡಿಸುವ ಉದ್ದೇಶದಿಂದ ಮಾಡಿದ ಕಾನೂನುಗಳಲ್ಲ. ಮಕ್ಕಳ ಹಕ್ಕುಗಳ ರಕ್ಷಿಸುವ ನಿಟ್ಟಿನಲ್ಲಿ ಮಾಡಿರುವಂತಹ ಕಾನೂನುಗಳಾಗಿವೆ ಎಂದು ತಿಳಿಸಿದ ಅವರು, ಬಾಲ ನ್ಯಾಯ ಕಾಯ್ದೆಯಲ್ಲಿ ಮಕ್ಕಳನ್ನು ಅಪರಾಧಿ ಎಂತಲೂ ಸಹ ಕರೆಯಲಾಗುವುದಿಲ್ಲ. ಇದು ಕಾನೂನಿನ ಸಂವೇದನಾಶೀಲತೆಯನ್ನು ತಿಳಿಸುತ್ತದೆ. ಇವು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ದೊಡ್ಡ  ಕರ್ತವ್ಯ  ಎಂಬ ಉದ್ದೇಶದಿಂದ ಮಾಡಿರುವ ಕಾನೂನುಗಳಾಗಿವೆ ಎಂದು ಹೇಳಿದರು.

 

ಬಾಲ ನ್ಯಾಯ ಕಾಯ್ದೆಯಲ್ಲಿ ಬಹಳಷ್ಟು ಕಾರ್ಯವಿಧಾನಗಳನ್ನು ಅನುಸರಿಸಬೇಕಾಗುತ್ತದೆ. ಕಾರ್ಯವಿಧಾನ ಅನುಸರಿಸಬೇಕಾದರೆ ಕೆಲವೊಂದು ಸಲ ಲೋಪ-ದೋಷಗಳಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಮ್ಮ ಕಡೆಯಿಂದ ಯಾವುದೇ ತಪ್ಪುಗಳು ಆಗಬಾರದು ಎಂಬ ಉದ್ದೇಶದಿಂದ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬಾಲನ್ಯಾಯ ಮಂಡಳಿ ಅಧ್ಯಕ್ಷರಾದ ಉಜ್ವಲ ವೀರಣ್ಣ ಸಿದ್ದಣ್ಣವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್, ಬೆಂಗಳೂರಿನ ಎಸ್‍ಜೆಪಿಯು-ಸಿಐಡಿ ಪೊಲೀಸ್ ತರಬೇತುದಾರ ಸಿ.ಜಿ.ರೋಹಿತ, ಪೊಲೀಸ್ ಉಪಾಧೀಕ್ಷಕರು ಹಾಗೂ ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪಿ.ಕೆ.ದಿನಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಇದ್ದರು.

suddionenews

Recent Posts

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ…

59 minutes ago

ಸುದ್ದಿಒನ್ MOTIVATION : ಭಗವದ್ಗೀತೆಯ ಈ ಮೂರು ವಿಷಯಗಳು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಉಪಯುಕ್ತ….!

  ಭಗವದ್ಗೀತೆಯಿಂದ ಕಲಿಯಬೇಕಾದ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸನ್ನು ಬಯಸುತ್ತಾನೆ. ಅದಕ್ಕಾಗಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾನೆ ಮತ್ತು ಶ್ರಮಿಸುತ್ತಾನೆ.…

5 hours ago

ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ

ಈ ರಾಶಿಯವರಿಗೆ ಹಣಕಾಸಿನ ತೀವ್ರ ಅಡಚಣೆ, ಈ ರಾಶಿಯವರಿಗೆ ಕೆಲಸದಲ್ಲಿ ಅಭದ್ರತೆ, ಸಂಗಾತಿಯಿಂದ ಮೋಸ ಸಂಭವ, ಶುಕ್ರವಾರದ ರಾಶಿ ಭವಿಷ್ಯ…

8 hours ago

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

15 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

15 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

16 hours ago