Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಲೇಜುಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ತರಬೇತಿಯ ಅಗತ್ಯವಿದೆ : ಪ್ರೊ. ಎಂ.ಎಸ್.ಸುಧಾದೇವಿ

Facebook
Twitter
Telegram
WhatsApp

ಚಿತ್ರದುರ್ಗ : ಸರ್ಕಾರಿ ಕಾಲೇಜು, ಅನುದಾನಿತ ಕಾಲೇಜುಗಳಲ್ಲಿ ಕೆಲಸದ ಒತ್ತಡ ಇರುವುದರಿಂದ ಪ್ರತಿದಿನವೂ ಬೇರೆ ಕಾಲೇಜಿನ ಇಲ್ಲವೇ ಹಿರಿಯರ ಸಲಹೆ ಪಡೆದುಕೊಂಡು ಕೆಲಸ ಮಾಡುವಂತ ಪರಿಸ್ಥಿತಿ ಇರುವುದರಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ತರಬೇತಿಯ ಅಗತ್ಯವಿದೆ ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಂ.ಎಸ್.ಸುಧಾದೇವಿ ಹೇಳಿದರು.

ಸರಸ್ವತಿ ಕಾನೂನು ಕಾಲೇಜು ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವೃತ್ತಿಪರ ಅಭಿವೃದ್ದಿ ಹಾಗೂ ಆಡಳಿತಾತ್ಮಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪದವಿ, ಬಿ.ಇ.ಡಿ, ಕಾನೂನು ಹೀಗೆ ಬೇರೆ ಬೇರೆ ಕಾಲೇಜುಗಳಿಗೆ ಒಂದೊಂದು ಆದೇಶ ಅನ್ವಯವಾಗುತ್ತದೆ.

ಏನೇನು ಆದೇಶ ಹೇಗೆ ನಿರ್ವಹಿಸಿ ಕೆಲಸದ ಒತ್ತಡ ಎಲ್ಲಾ ಗೊಂದಲಗಳಿಗೂ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎನ್ನುವುದಕ್ಕಾಗಿ ತರಬೇತಿ ಅತ್ಯವಶ್ಯಕವಾಗಿ ಬೇಕು. ಸರ್ಕಾರಿ ಕಾಲೇಜು ಹಾಗೂ ಅನುದಾನಿತ ಕಾಲೇಜುಗಳಲ್ಲಿಯೂ ಸಾಕಷ್ಟು ಒತ್ತಡಗಳಿವೆ. ಉನ್ನತ ಶಿಕ್ಷಣ ನೀತಿ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಬದಲಾವಣೆಯಾಗಿರುವುದರಿಂದ ತಂತ್ರಜ್ಞಾನಕ್ಕೆ ತಕ್ಕಂತೆ ಮೇಲ್ದರ್ಜೆಗೇರಿದಾಗ ಮಾತ್ರ ಕೆಲಸದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ತಿಳಿಸಿದರು.

ಇ.ಮೇಲ್, ಗೂಗಲ್‌ನಲ್ಲಿ ಹುಡುಕಾಡಿ ಕ್ಷಣಾರ್ಧದಲ್ಲಿಯೇ ಹೊಸ ಹೊಸ ಆದೇಶಗಳನ್ನು ಪಡೆದುಕೊಳ್ಳುವಷ್ಟು ತಂತ್ರಜ್ಞಾನ ಮುಂದುವರೆದಿದೆ. ಅನುದಾನಿತ ಸಂಸ್ಥೆಗಳಲ್ಲಿ ಸಿಬ್ಬಂದಿಗಳಿಗೆ ತರಬೇತಿಯಿಲ್ಲದ ಕಾರಣ ಅಡ್ವಾನ್ಸ್ಗೆ ಹೊಂದಿಕೊಳ್ಳುವುದು ಕಷ್ಟವಾಗುತ್ತಿದೆ. ತ್ವರಿತವಾಗಿ ಮಾಹಿತಿಗಳನ್ನು ಪಡೆದುಕೊಳ್ಳಲು ಹಾಗೂ ಮಾಹಿತಿಗಳನ್ನು ನೀಡಲು ಕಡ್ಡಾಯವಾಗಿ ಕಂಪ್ಯೂಟರ್ ತರಬೇತಿ ಬೇಕೆ ಬೇಕು. ಇದರಿಂದ ಕೆಲಸದಲ್ಲಿ ಅರ್ಧದಷ್ಟು ಒತ್ತಡ ಕಡಿಮೆಯಾಗುತ್ತದೆ ಎಂದರು.

ಬೆಂಗಳೂರು ಕಾಲೇಜು ಶಿಕ್ಷಣ ಆಯುಕ್ತರ ಕಚೇರಿ ಉನ್ನತ ಶಿಕ್ಷಣ ಸೌಧದ ಗೆಜೆಟೆಡ್ ಮ್ಯಾನೇಜರ್ ಟಿ.ಆರ್.ಮಂಜುನಾಥ್ ತರಬೇತಿ ವಿಷಯ ಪ್ರವೇಶ ಸಂವಾದ ಕುರಿತು ಮಾತನಾಡುತ್ತ ಸರ್ಕಾರಿ, ಅನುದಾನಿತ ಸಂಸ್ಥೆಗಳಾಗಲಿ ವೃತ್ತಿಯಲ್ಲಿ ಪ್ರಗತಿ ಹೊಂದಬೇಕಾದರೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ತರಬೇತಿ ಪಡೆಯಬೇಕು. ಪ್ರತಿಯೊಂದು ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಗಣಕ ಯಂತ್ರ, ಗೂಗಲ್, ಫೇಸ್‌ಬುಕ್, ವಾಟ್ಸ್ಪ್‌ಗಳಲ್ಲಿಯೇ ಅನೇಕ ಮಾಹಿತಿಗಳನ್ನು ಪಡೆದುಕೊಳ್ಳಬಹುದು.

ದೈನಂದಿನ ಆಡಳಿತದಲ್ಲಿ ಎದುರಿಸುವ ಸಮಸ್ಯೆಗಳಿಗೆ ನೌಕರರು ಮತ್ತು ಮುಖ್ಯಸ್ಥರು ಪರಿಹಾರ ಕಂಡುಕೊಳ್ಳಬೇಕಾದರೆ ಸರ್ಕಾರಿ ನಿಯಮದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಡಿ.ಗ್ರೂಪ್ ನೌಕರನಿಂದ ಹಿಡಿದು ಉನ್ನತ ಮಟ್ಟದ ಅಧಿಕಾರಿಯೂ ಒಂದಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ದಿ ಪಥದಲ್ಲಿ ಹೋಗಲು ಸಾಧ್ಯ ಎಂದು ಹೇಳಿದರು.

ಆಡಳಿತದಲ್ಲಿ ಮುಖ್ಯಸ್ಥರು ಹೇಳುವ ಕೆಲಸವನ್ನು ಸಿಬ್ಬಂದಿಗಳು ಪ್ರಾಮಾಣಿಕವಾಗಿ ಮಾಡಬೇಕು. ಯಾರು ಮೇಲು, ಯಾರು ಕೀಳಲ್ಲ. ಸರ್ಕಾರದ ಯೋಜನೆಗಳು ದಿನೆ ದಿನೆ ಜಾಸ್ತಿಯಾಗುತ್ತಿದೆ. ಸಮರ್ಪಕವಾಗಿ ಜನರಿಗೆ ಸೇವೆ ನೀಡಬೇಕಾದರೆ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಲೇಬೇಕು. ಅದಕ್ಕಾಗಿ ಕೆಲಸ ಮಾಡುವ ಕ್ಷೇತ್ರದಲ್ಲಿ ಜ್ಞಾನವಿರಬೇಕು. ತರಬೇತಿಯಿಂದ ಕೌಶಲ್ಯ ಸಿಗುತ್ತದೆ. ಕರ್ತವ್ಯ ಪ್ರಜ್ಞೆ ಹೆಚ್ಚಾಗಿ ಯಾವ್ಯಾವ ಸಮಸ್ಯೆಗಳಿಗೆ ಏನೇನು ನಿಯಮಗಳನ್ನು ಓದಬೇಕು ಎನ್ನುವುದನ್ನು ತರಬೇತಿಯಲ್ಲಿ ತಿಳಿದುಕೊಳ್ಳಬಹುದು ಎಂದು ನುಡಿದರು.

ಗೂಗಲ್‌ನಿಂದ ಸಣ್ಣ ಸಣ್ಣ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದು. ಪ್ರತಿಯೊಂದು ಹಂತವನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಿದಾಗ ಒತ್ತಡ ಸಮಸ್ಯೆಗಳನ್ನು ನಿಭಾಯಿಸುವುದು ಕಷ್ಟವಾಗುವುದಿಲ್ಲ. ಸೌಲತ್ತುಗಳನ್ನು ಪಡೆಯಬೇಕಾದರೆ ಇರುವ ಮನಸ್ಥಿತಿ ಜನರಿಗೆ ಸೇವೆ ನೀಡುವಾಗಲೂ ಇರಬೇಕು. ಅದಕ್ಕಾಗಿ ಅಧ್ಯಯನಶೀಲರಾಗಬೇಕು ಎಂದು ಹೇಳಿದರು.

ಸರಸ್ವತಿ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಪ್ರೊ.ನಟರಾಜ್ ಡಿ.ಹೆಚ್. ವೆಂಕಟೇಶ್ವರ ಬಿ.ಇ.ಡಿ.ಕಾಲೇಜಿನ ಪ್ರಾಂಶುಪಾಲರಾದ ರುದ್ರಮುನಿ, ಎಸ್.ಜೆ.ಎಂ.ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಈಶ್ವರಪ್ಪ ವೇದಿಕೆಯಲ್ಲಿದ್ದರು.

ಸಹಾಯಕ ಗ್ರಂಥ ಪಾಲಕ ಷಣ್ಮುಖ ಎಸ್. ಪ್ರಾರ್ಥಿಸಿದರು. ಸರಸ್ವತಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ, ಸ್ವಾಗತಿಸಿದರು.

ಸಹಾಯಕ ಪ್ರಾಧ್ಯಾಪಕ ಡಾ.ಭೈರಸಿದ್ದಪ್ಪ ಜಿ.ಈ. ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪಿ.ಸಿ.ಮುರುಗೇಶ್ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!