Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೇಕರಿ ಉತ್ಪನ್ನಗಳ ಕುರಿತು ತರಬೇತಿ : ಇಚ್ಛೆಯುಳ್ಳವರು ಸಂಪರ್ಕಿಸಿ…!

---Advertisement---

 

ಚಿತ್ರದುರ್ಗ. ಸೆಪ್ಟೆಂಬರ್.06: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿಸಿರುವ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ರಾಗಿ ಬಿಸ್ಕತ್, ಕೊಬ್ಬರಿ ಬಿಸ್ಕತ್, ಫ್ರೂಟ್ ಕೇಕ್, ಪ್ಲೇನ್ ಕೇಕ್, ಹನಿ ಕೇಕ್, ಬ್ರೆಡ್, ಬನ್, ಖಾರ ಬನ್, ದಿಲ್ ಪಸಂದ್, ಸಿರಿಧಾನ್ಯಗಳ ಬಿಸ್ಕತ್ ಹಾಗೂ ಇನ್ನಿತರ ಉತ್ಪನ್ನಗಳ ತಯಾರಿಕೆಯ ಕುರಿತು ಇದೇ ಸೆ.23 ರಿಂದ ಅಕ್ಟೋಬರ್ 23 ರವರೆಗೆ ಒಂದು ತಿಂಗಳ ಪ್ರಮಾಣ ಪತ್ರ ಕೋರ್ಸ್ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ತರಬೇತಿ ಶುಲ್ಕ ರೂ.3000/- ಪಾವತಿಸಿ, ಇದೇ ಸೆಪ್ಟೆಂಬರ್ 20ರೊಳಗಾಗಿ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ. ಮೊದಲು ನೊಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ. ಜೆ.ಎಂ.ಸರಸ್ವತಿ ಅವರ ಮೊಬೈಲ್ ಸಂಖ್ಯೆಗೆ 9986647124 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment