ಚಿತ್ರದುರ್ಗ. ಸೆಪ್ಟೆಂಬರ್.06: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿಸಿರುವ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ರಾಗಿ ಬಿಸ್ಕತ್, ಕೊಬ್ಬರಿ ಬಿಸ್ಕತ್, ಫ್ರೂಟ್ ಕೇಕ್, ಪ್ಲೇನ್ ಕೇಕ್, ಹನಿ ಕೇಕ್, ಬ್ರೆಡ್, ಬನ್, ಖಾರ ಬನ್, ದಿಲ್ ಪಸಂದ್, ಸಿರಿಧಾನ್ಯಗಳ ಬಿಸ್ಕತ್ ಹಾಗೂ ಇನ್ನಿತರ ಉತ್ಪನ್ನಗಳ ತಯಾರಿಕೆಯ ಕುರಿತು ಇದೇ ಸೆ.23 ರಿಂದ ಅಕ್ಟೋಬರ್ 23 ರವರೆಗೆ ಒಂದು ತಿಂಗಳ ಪ್ರಮಾಣ ಪತ್ರ ಕೋರ್ಸ್ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ತರಬೇತಿ ಶುಲ್ಕ ರೂ.3000/- ಪಾವತಿಸಿ, ಇದೇ ಸೆಪ್ಟೆಂಬರ್ 20ರೊಳಗಾಗಿ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ. ಮೊದಲು ನೊಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ. ಜೆ.ಎಂ.ಸರಸ್ವತಿ ಅವರ ಮೊಬೈಲ್ ಸಂಖ್ಯೆಗೆ 9986647124 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









