ಮಾರ್ಚ್ 13 ಮತ್ತು 14ರಂದು ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗ. ಮಾ.12:ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ಮಾರ್ಚ್ 13 ಮತ್ತು 14ರಂದು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆ ಹೆಚ್ಚಿಸಲು ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಜಿಲ್ಲೆಯ ರೈತರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 13ರಂದು ಬೆಳಿಗ್ಗೆ 10ಕ್ಕೆ ಚಳ್ಳಕೆರೆ ತಾಲ್ಲೂಕಿನ ಪ್ರಗತಿಪರ ರೈತರಾದ ಬಡಗಿ ರಂಗಣ್ಣರವರ ಜಮೀನಿನಲ್ಲಿ ಹಾಗೂ ಮಾರ್ಚ್ 14ರಂದು ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯ ಮಾಜಿ ಡೀನ್ ಡಾ. ಎಂ. ಜಿ ಗೋವಿಂದಯ್ಯರವರ ಜಮೀನಿನಲ್ಲಿ ರೈತಬಾಂಧವರಿಗೆ ನೀರಿನ ಸಮರ್ಥ ಬಳಕೆಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಮತ್ತು ಅವುಗಳ ನಿರ್ವಹಣೆಯ ಕುರಿತು ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞರಾದ ಅಂಜಿನಪ್ಪರವರು ಮಂಡನೆ ಮಾಡಲಿದ್ದಾರೆ.
ಮಾರ್ಚ್13 ರಂದು ಗುಡಿಹಳ್ಳಿ ಗ್ರಾಮದಲ್ಲಿ ನಡೆಯುವ ತರಬೇತಿ ಕಾರ್ಯಗಾರದಲ್ಲಿ ಪಶು ವೈದ್ಯಕೀಯ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಡಾ. ದೊಡ್ಡಮಲ್ಲಯ್ಯ ಅವರು ಬೇಸಿಗೆಯಲ್ಲಿ ರಾಸುಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಗತಿಪರ ರೈತರಾದ ಡಾ.ದಯಾನಂದ ಮೂರ್ತಿ, ರುದ್ರಮುನಿಯಪ್ಪ, ಬಡಗಿರಂಗಣ್ಣ ಹಾಗೂ ಚಿತ್ರಲಿಂಗಪ್ಪರವರು ತಾವು ಅಳವಡಿಸಿಕೊಂಡ ಸಮಗ್ರ ಕೃಷಿ ಪದ್ದತಿ ಕುರಿತು ರೈತರಿಗೆ ತಮ್ಮ ಅನುಭವ ಹಂಚಿಕೊಳ್ಳುವರು.

 

ಮಾರ್ಚ್ 14ರಂದು ಹರಿಯಬ್ಬೆ ಗ್ರಾಮದಲ್ಲಿ ವಲಯ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ. ವಿಜಯ್ ಎಸ್ ದಾನರೆಡ್ಡಿ ಅವರು ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಮತ್ತು ದಾಳಿಂಬೆ ಬೆಳೆಯಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು. ಆದ ಪ್ರಯುಕ್ತ ಪ್ರತಿ ದಿನ ಆಸಕ್ತ 60 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

suddionenews

Recent Posts

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು

ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…

44 minutes ago

ಹುಬ್ಬಳ್ಳಿಯಲ್ಲಿ ಕಣ್ಣೀರುಡುತ್ತಾ ಜೈನ ಮುನಿ ಸರ್ಕಾರಕ್ಕೆ ಹೇಳಿದ್ದೇನು..?

ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…

10 hours ago

ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಅಶ್ವಿನಿ ಅವರಿಂದ ವಿಶೇಷ ಕಾರ್ಯಕ್ಕೆ ಚಾಲನೆ

ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…

11 hours ago

ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ : ಎನ್.ಎಸ್.ಮಂಜುನಾಥ

  ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…

12 hours ago

ಅಗ್ನವೀರ್ ನೇಮಕಾತಿ ಅರ್ಜಿ ಆಹ್ವಾನ

ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…

12 hours ago

ಚಿತ್ರದುರ್ಗ : ಮಾರ್ಚ್ 18 ರಿಂದ 21 ರವರೆಗೆ ಕಣಿವೆಮಾರಮ್ಮನ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

12 hours ago