ಮಾರ್ಚ್ 13 ಮತ್ತು 14ರಂದು ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ

ಚಿತ್ರದುರ್ಗ. ಮಾ.12:ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಇದೇ ಮಾರ್ಚ್ 13 ಮತ್ತು 14ರಂದು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆ ಹೆಚ್ಚಿಸಲು ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಜಿಲ್ಲೆಯ ರೈತರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 13ರಂದು ಬೆಳಿಗ್ಗೆ 10ಕ್ಕೆ ಚಳ್ಳಕೆರೆ ತಾಲ್ಲೂಕಿನ ಪ್ರಗತಿಪರ ರೈತರಾದ ಬಡಗಿ ರಂಗಣ್ಣರವರ ಜಮೀನಿನಲ್ಲಿ ಹಾಗೂ ಮಾರ್ಚ್ 14ರಂದು ರಂದು ಬೆಳಿಗ್ಗೆ 10ಕ್ಕೆ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯ ಮಾಜಿ ಡೀನ್ ಡಾ. ಎಂ. ಜಿ ಗೋವಿಂದಯ್ಯರವರ ಜಮೀನಿನಲ್ಲಿ ರೈತಬಾಂಧವರಿಗೆ ನೀರಿನ ಸಮರ್ಥ ಬಳಕೆಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಮತ್ತು ಅವುಗಳ ನಿರ್ವಹಣೆಯ ಕುರಿತು ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞರಾದ ಅಂಜಿನಪ್ಪರವರು ಮಂಡನೆ ಮಾಡಲಿದ್ದಾರೆ.
ಮಾರ್ಚ್13 ರಂದು ಗುಡಿಹಳ್ಳಿ ಗ್ರಾಮದಲ್ಲಿ ನಡೆಯುವ ತರಬೇತಿ ಕಾರ್ಯಗಾರದಲ್ಲಿ ಪಶು ವೈದ್ಯಕೀಯ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದ ಡಾ. ದೊಡ್ಡಮಲ್ಲಯ್ಯ ಅವರು ಬೇಸಿಗೆಯಲ್ಲಿ ರಾಸುಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಗತಿಪರ ರೈತರಾದ ಡಾ.ದಯಾನಂದ ಮೂರ್ತಿ, ರುದ್ರಮುನಿಯಪ್ಪ, ಬಡಗಿರಂಗಣ್ಣ ಹಾಗೂ ಚಿತ್ರಲಿಂಗಪ್ಪರವರು ತಾವು ಅಳವಡಿಸಿಕೊಂಡ ಸಮಗ್ರ ಕೃಷಿ ಪದ್ದತಿ ಕುರಿತು ರೈತರಿಗೆ ತಮ್ಮ ಅನುಭವ ಹಂಚಿಕೊಳ್ಳುವರು.

 

ಮಾರ್ಚ್ 14ರಂದು ಹರಿಯಬ್ಬೆ ಗ್ರಾಮದಲ್ಲಿ ವಲಯ ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ. ವಿಜಯ್ ಎಸ್ ದಾನರೆಡ್ಡಿ ಅವರು ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಮತ್ತು ದಾಳಿಂಬೆ ಬೆಳೆಯಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು. ಆದ ಪ್ರಯುಕ್ತ ಪ್ರತಿ ದಿನ ಆಸಕ್ತ 60 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

suddionenews

Recent Posts

ಸೋಮಶೇಖರ್, ಶಿವರಾಮ್ ಹೆಬ್ಬಾರ್ ಬಿಜೆಪಿಯಿಂದ ಉಚ್ಚಾಟನೆಗೊಳ್ಳುತ್ತಾರಾ..?

ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…

44 minutes ago

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ರೇಟ್ ಎಷ್ಟಿದೆ ?

  ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…

2 hours ago

ಚಿತ್ರದುರ್ಗ ಪಿಎಸ್ಐ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ ಆರೋಪ

  ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…

3 hours ago

ರುದ್ರಪ್ಪ ಲಮಾಣಿ ದಿಢೀರನೇ ಬೆಂಗಳೂರಿಗೆ ಶಿಫ್ಟ್

  ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…

3 hours ago

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ

ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…

10 hours ago

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

19 hours ago