ಚಿತ್ರದುರ್ಗ.ಫೆ.23: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.26 ರಿಂದ 28 ರವರೆಗೆ ಮೊಳಕಾಲ್ಮೂರು ಮತ್ತು ಚಳ್ಳಕೆರೆ ತಾಲ್ಲೂಕಿನ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಮತ್ತು ತುಂತುರ ನೀರಾವರಿ ಘಟಕಗಳ ಅಳವಡಿಕೆ, ಅವುಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಕಾರ್ಯಕ್ರಮದಲ್ಲಿ ಧಾರವಾಡ ಕೃಷಿ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಜಿ.ಶಶಿಧರ್, ಎಜಿಎಂ ಪ್ರೀಮೀಯರ್ ಇರೀಗೇಷನ್ ವಿಜಯ್ ಕುಮಾರ್, ನೆಟಾಫಿನ್ ಇರಿಗೇಷನ್ ಬೇಸಾಯ ತಜ್ಞ ಅಂಜಿನಪ್ಪ ಅವರು ನೀರಿನ ಸಮರ್ಥ ಬಳಕೆ, ಹನಿ ನೀರಾವರಿ ಮತ್ತು ಸ್ಪ್ರೀಂಕ್ಲರ್ಘಟಕಗಳ ಅಳವಡಿಕೆ, ಉಪಯೋಗ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.
ಫೆ.26ರಂದು ಮೊಳಕಾಲ್ಮೂರು ತಾಲ್ಲೂಕಿನ 60 ಜನ ಆಸಕ್ತ ರೈತರು ಹಾಗೂ ಫೆ.27ರಂದು ಚಳ್ಳಕೆರೆ ತಾಲ್ಲೂಕಿನ ಕಸಬಾ ಮತ್ತು ಪರುಶುರಾಂಪುರ ಹೋಬಳಿಯ 60 ಜನ ರೈತರು ಹಾಗೂ ಫೆ. 28ರಂದು ಚಳ್ಳಕೆರೆ ತಾಲ್ಲೂಕಿನ ತಳಕು ಮತ್ತು ನಾಯಕನಹಟ್ಟಿ ಹೋಬಳಿಯ 60 ಜನ ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (8277931058), ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಮೊದಲು ನೋಂದಾವಣಿ ಮಾಡಿಕೊಂಡ 60 ಜನರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









