Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣವನ್ನು ಗಮನಕ್ಕೆ ತಂದಿದ್ದ ಡಿಸಿ ಸೇರಿದಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ..!

---Advertisement---

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಡಿಸಿ ಕೆ.ವಿ.ರಾಜೇಂದ್ರ ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಮೈಸೂರು ಡಿಸಿಯಾಗಿದ್ದ ಕೆ.ವಿ.ರಾಜೇಂದ್ರ ಅವರು ಬೆಂಗಳೂರಿಗೆ ಬಂದಿದ್ದು, ಪ್ರವಾಸೋದ್ಯಮ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. ಮೈಸೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಇನ್ನುಳಿದಂತೆ ವರ್ಗಾವಣೆಯಾದ ಅಧಿಕಾರಿಗಳ ಲೀಸ್ಟ್ ಇಲ್ಲಿದೆ:

* ವರ್ಗಾವಣೆಯಾದ ಅಧಿಕಾರಿಗಳು ಮತ್ತು ನಿಯುಕ್ತಗೊಂಡ ಇಲಾಖೆ
* ಡಾ ರಾಮ್ ಪ್ರಸಾತ್ ಮನೋಹರ್ ವಿ.: ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.

* ನಿತೇಶ್ ಪಾಟೀಲ್: ನಿರ್ದೇಶಕರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ, ಬೆಂಗಳೂರು.

* ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತೆ ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು

* ಜ್ಯೋತಿ ಕೆ: ಆಯುಕ್ತೆ ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕರು, ಬೆಂಗಳೂರು.

*
ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.

* ರಾಮ್ ಪ್ರಸಾತ್ ಮನೋಹರ್: ವ್ಯವಸ್ಥಾಪಕರು ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಬೆಂಗಳೂರು.
* ಚಂದ್ರಶೇಖರ ನಾಯಕ ಎಲ್: ಆಯುಕ್ತರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ (ಜಾರಿ), ಬೆಂಗಳೂರು.

* ವಿಜಯಮಹಾಂತೇಶ ಬಿ ದಾನಮ್ಮನವರ್: ಉಪ ಆಯುಕ್ತ, ಹಾವೇರಿ ಜಿಲ್ಲೆ

* ಗೋವಿಂದ ರೆಡ್ಡಿ: ಉಪ ಆಯುಕ್ತ, ಬೀದರ್

* ರಘುನಂದನ್ ಮೂರ್ತಿ: ಆಯುಕ್ತರು ಖಜಾನೆಗಳು ಮತ್ತು ಲೆಕ್ಕಪತ್ರ ಇಲಾಖೆ, ಬೆಂಗಳೂರು.

*ಡಾ. ಗಂಗಾಧರಸ್ವಾಮಿ ಜಿ ಎಂ: ಉಪ ಆಯುಕ್ತ , ದಾವಣಗೆರೆ ಜಿಲ್ಲೆ

* ನಿತೀಶ್ ಕೆ: ಉಪ ಆಯುಕ್ತ, ರಾಯಚೂರು ಜಿಲ್ಲೆ

* ಮೊಹಮ್ಮದ್ ರೋಶನ್: ಉಪ ಆಯುಕ್ತ, ಬೆಳಗಾವಿ ಜಿಲ್ಲೆ

* ಶಿಲ್ಪಾ ಶರ್ಮಾ: ಉಪ ಆಯುಕ್ತೆ, ಬೀದರ್ ಜಿಲ್ಲೆ

* ಡಾ ದಿಲೀಶ್ ಸಸಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಿಟಿಜನ್ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS), ಸಿಬ್ಬಂದಿ ಇಲಾಖೆ ಮತ್ತು ಆಡಳಿತಾತ್ಮಕ ಸುಧಾರಣೆಗಳು (ಇ-ಆಡಳಿತ) ಕೇಂದ್ರ, ಬೆಂಗಳೂರು.

* ಲೋಖಂಡೆ ಸ್ನೇಹಲ್ ಸುಧಾಕರ್: ನಿರ್ದೇಶಕ, ಕರ್ನಾಟಕ ವಿದ್ಯುತ್ ವ್ಯವಸ್ಥಾಪಕ ಕಾರ್ಖಾನೆ ಲಿಮಿಟೆಡ್

* ಶ್ರೀರೂಪ: ಆಯುಕ್ತೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು, ನಿರ್ದೇಶರು ಕರ್ನಾಟಕ ರಾಜ್ಯ ರೇಷ್ಮೆ ಕೃಷಿ ಸಂಶೋಧನೆ ಅಭಿವೃದ್ಧಿ ಸಂಸ್ಥೆ

* ಗಿಟ್ಟೆ ಮಾಧವ್ ವಿಠ್ಠಲ್ ರಾವ್: ಪ್ರಧಾನ ವ್ಯವಸ್ಥಾಪಕರು, (ಪುನರ್ವಸತಿ ಮತ್ತು ಪುನರ್ವಸತಿ), ಬಾಗಲಕೋಟೆ.

* ಹೇಮಂತ್ ಎನ್: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಶಿವಮೊಗ್ಗ ನೊಂಗ್ಜೈ ಮೊಹಮ್ಮದ್ ಅಲಿ

* ಅಕ್ರಮ್ ಶಾ: ಮುಖ್ಯ ಕಾರ್ಯನಿರ್ವಾಹಕ, ವಿಜಯನಗರ ಜಿಲ್ಲೆ ಜಿಲ್ಲಾ ಪಂಚಾಯತ್ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment