Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IAS ಅಧಿಕಾರಿಗಳ ವರ್ಗಾವಣೆ : ರೋಹಿಣಿ ಸಿಂಧೂರಿ ಅವರ ಗಣಿ ಜವಬ್ದಾರಿಯೂ ಬದಲಾವಣೆ..!

---Advertisement---

ಬೆಂಗಳೂರು: ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ರೋಹಿಣಿ ಸಿಂಧೂರಿ ಅವರು ನಿರ್ವಹಣೆ ಮಾಡುತ್ತಿದ್ದಂತ ವಾಣಿಜ್ಯ‌ಮತ್ತು ಕೈಗಾರಿಕಾ ಇಲಾಖೆ (ಗಣಿ) ಕಾರ್ಯದರ್ಶಿ ಹುದ್ದೆಯಿಂದ ಬದಲಾವಣೆ ಮಾಡಲಾಗಿದೆ. ಬೇರೆ ಐಎಎಸ್ ಅಧಿಕಾರಿಯನ್ನ ನೇಮಕ ಮಾಡಲಾಗಿದೆ. 2005ನೇ ಬ್ಯಾಚ್ ನ ಹಿರಿಯ ಐಎಎಸ್ ಅಧಿಕಾರಿ ವಿಪುಲ್ ಬನ್ಸಾಲ್ ಅವರಿಗೆ ಗಣಿ ಹುದ್ದೆಯನ್ನ ನೀಡಲಾಗಿದೆ.

ಗಣಿ ವಿಭಾಗಕ್ಕೆ ಕಳೆದ ವರ್ಷ ಅಂದ್ರೆ 2025ರ ಅಕ್ಟೋಬರ್ 10ರಂದು ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿತ್ತು. ಈಗ ವಿಪುಲ್ ಬನ್ಸಾಲ್ ಅವರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ.ಬಸವರಾಜು ಅವರು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಆಗಿದ್ದಂತ ಡಾ.ಕೆಎನ್ ಅನುರಾಧ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅನುರಾಧ ಅವರಿಗೆ ಹೆಚ್ಚಿನ ಜವಬ್ದಾರಿಯಾಗಿ ಜಿಪಂ ಸಿಇಒ ಆಗಿನೂ ಮುಂದುವರೆಯುವಂತೆ ಸೂಚನೆ‌ ನೀಡಿದ್ದಾರೆ.

ಇನ್ನು ಬೆಂಗಳೂರಿನ ಕಾರ್ಮಿಕ ಇಲಾಖೆಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ ಅವರಿಗೆ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಜವಬ್ದಾರಿ ನೀಡಲಾಗಿದೆ. ಐಎಎಸ್ ಅಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಹೆಚ್ಚುವರಿ ಹೊಣೆಯಿಂದ ಬಿಡುಗಡೆ ಮಾಡಲಾಗಿದೆ. ಹೀಗೆ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ಮಾಡಲಾಗಿದೆ. ರಾಜ್ಯ ಸರ್ಕಾರ ಸದ್ಯ ಈ ಆದೇಶವನ್ನ ಹೊರಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now