Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ವರ್ಗಾವಣೆ ; ಸಾರ್ವಜನಿಕರ ಪ್ರತಿಭಟನೆ, ಮನವಿ

Facebook
Twitter
Telegram
WhatsApp

 

                       ವರದಿ ಮತ್ತು ಫೋಟೋ ಕೃಪೆ                          ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಫೆ.27): ಗೋಪಾಲಪುರ ರಸ್ತೆಯ ಮಾರುತಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಮಂಜುನಾಥ್‍ರವರನ್ನು ಏಕಾಏಕಿ ವರ್ಗಾವಣೆಗೊಳಿಸಿರುವುದನ್ನು ವಿರೋಧಿಸಿ ಸ್ಪೂರ್ತಿ ವಿನಾಯಕ ಸೇವಾ ಸಾಂಸ್ಕೃತಿಕ ಕಲಾ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಇಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಮಂಜುನಾಥ್ ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ರೋಗಿಗಳಿಗೆ ಚಿಕಿತ್ಸೆ ನೀಡಿ ಬಡವರ ವೈದ್ಯರೆಂದೆ ಪ್ರಸಿದ್ದಿಯಾಗಿದ್ದರು.

ಇವರ ವರ್ಗಾವಣೆಯಿಂದ ಭೋವಿ ಕಾಲೋನಿ, ಮಾರುತಿ ನಗರ, ಆಜಾದ್ ನಗರ, ಹಿಮ್ಮತ್‍ನಗರ, ಗೋಪಾಲಪುರ, ದರ್ಜಿ ಕಾಲೋನಿಯ ಬಡವರು ಚಿಕಿತ್ಸೆ ಪಡೆದುಕೊಳ್ಳಲು ಪರದಾಡುವಂತಾಗಿದೆ. ಹಾಗಾಗಿ ಡಾ.ಮಂಜುನಾಥ್‍ರವರ ವರ್ಗಾವಣೆಯನ್ನು ರದ್ದುಪಡಿಸಿ ಪುನಃ ಅಲ್ಲಿಗೆ ನೇಮಕಗೊಳಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ಎನ್.ಚಂದ್ರಶೇಖರ್, ಸಂದೀಪ್, ಉದಯಪ್ರಸಾದ್, ರವಿಕುಮಾರ್, ಕೆ.ಬಿ.ಶ್ರೀನಿವಾಸ್, ವೆಂಕಟೇಶ್, ಎಂ.ಡಿ.ಸಾಧಿಕ್, ಕಮ್ರಾನ್, ಭೀಮಪ್ಪ, ಗಾಯಿತ್ರಮ್ಮ, ಹನುಮಂತಮ್ಮ, ಸಾದತ್, ಸಲ್ಮಾನ್ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!