Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಧ್ಯಪ್ರದೇಶದಲ್ಲಿ‌ ಶಂಕರಾಚಾರ್ಯರ ಏಕತಾ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಗೌರವ ಸಮರ್ಪಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಶಂಕರಾಚಾರ್ಯರ ಏಕತಾ ಪ್ರತಿಮೆ ಲೋಕಾರ್ಪಣೆಯಲ್ಲಿ ಭಾಗವಹಿಸಿ ಅಲ್ಲಿನ ಮುಖ್ಯಮಂತ್ರಿ ಶಿವರಾಜ್‍ಸಿಂಗ್ ಚೌಹ್ಹಾಣ್‍ರವರಿಗೆ ವಿಶೇಷ ಸ್ಮರಣಿಕೆ ನೀಡಿರುವ ಚಿತ್ರದುರ್ಗದ ವಿದ್ವಾನ್ ಗಣಪತಿ ಭಟ್ಟರು, ಸುಬ್ರಾಯಭಟ್ಟರು, ಅನಂತ ಭಟ್ಟರಿಗೆ ನಗರದ ಆನೆಬಾಗಿಲು ಬಳಿಯಿರುವ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ನಡೆದ ಸಾಮೂಹಿಕ ರುದ್ರಪಾರಾಯಣದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿದ್ವಾನ್ ಗಣಪತಿಭಟ್ಟರು ಕಾಳಿದಾಸನಿಗೆ ಮಧ್ಯಪ್ರದೇಶದ ಬಗ್ಗೆ ವಿಶೇಷ ಆಸಕ್ತಿಯಿತ್ತು. ಶಂಕರಾಚಾರ್ಯರ ಏಕತಾ ಪ್ರತಿಮೆ ಲೋಕಾರ್ಪಣೆಗೆ ಮಧ್ಯಪ್ರದೇಶಕ್ಕೆ ಹೋದಾಗ ಸಂಗೀತದ ಮೂಲಕ ನಮ್ಮನ್ನು ಸ್ವಾಗತಿಸಿದರು.

ತಲೆ ಮೇಲೆ ಹೂವು ಹಾಕಿ ಪಾದಮುಟ್ಟಿ ನಮಸ್ಕರಿಸಿ ಆತ್ಮೀಯತೆ ತೋರಿದರು ಸ್ವತಃ ಅಲ್ಲಿನ ಮುಖ್ಯಮಂತ್ರಿಯೆ ನಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಿ ಸತ್ಕರಿಸಿದರು ಎಂದು ನೆನಪಿಸಿಕೊಂಡು ಸ್ವದೇಶ, ಸ್ವಧರ್ಮ, ಸ್ವಾಭಿಮಾನ ಉಳಿಸಿಕೊಳ್ಳಬೇಕೆನಿಸುತ್ತದೆ ಎಂದು ತಮ್ಮ ಅನುಭವ ಹಂಚಿಕೊಂಡರು.

ಅನಂತಭಟ್ಟರು ಮಾತನಾಡಿ 108 ಅಡಿ ಎತ್ತರ ಪಂಚಲೋಹದಿಂದ ಶಂಕರಾಚಾರ್ಯರ ಪ್ರತಿಮೆಯನ್ನು ಮಧ್ಯಪ್ರದೇಶದ ಓಂಕಾರೇಶ್ವರದಲ್ಲಿ ಲೋಕಾರ್ಪಣೆ ಮಾಡಿರುವುದು ನಮಗೆಲ್ಲಾ ಸಂತಸವಾಗಿದೆ. ಇದರಿಂದ ಶಂಕರಾಚಾರ್ಯರ ಜೀವನ ತತ್ವಗಳನ್ನು ಹೇಳುವ ವ್ಯವಸ್ಥೆಯಾಗಿದೆ. ಇದಕ್ಕಾಗಿ 2500 ಕೋಟಿ ರೂ.ಗಳನ್ನು ಇಡಲಾಗಿದೆ. ಕೇವಲ ವೈದಿಕರಲ್ಲ. ಎಲ್ಲಾ ಜಾತಿಯವರು ಹಾಗೂ ಕಲಾವಿದರನ್ನು ಆಹ್ವಾಸಿದ್ದನ್ನು ನೋಡಿದರೆ ಜಾತಿಯತೆಯಿಂದ ಅಲ್ಲಿನ ಸರ್ಕಾರ ದೂರವಿದೆ ಎನ್ನುವುದು ಗೊತ್ತಾಯಿತು ಎಂದರು.

ಪುರೋಹಿತ ಯು.ಎಸ್.ರಮೇಶ್, ನರಸಿಂಹಮೂರ್ತಿ, ಟಿ.ಕೆ.ಶಂಕರ್, ಮಾರುತಿ ಮೋಹನ್, ರಾಜೀವಲೋಚನ, ಟಿ.ಕೆ.ನಾಗರಾಜ್‍ರಾವ್, ಅನಂತಕೃಷ್ಣಜೋಯಿಸ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!