ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಾಹಿತಿ, ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶಿಲ್ದಾರ್ ನೋಟೀಸ್ ಜಾರಿ ಮಾಡಿದ್ದರು. 10 ವರ್ಷದ ಸಂಬಳದ ಹಣವನ್ನು ವಾಪಾಸ್ ನೀಡಲು ಸೂಚಿಸಿದ್ದರು. ಈ ನೋಟೀಸ್ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ.
-…— CM of Karnataka (@CMofKarnataka) January 24, 2024
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಸರ್ಕಾರದ ಗಮನಕ್ಕೂ ತರದೆ ತಹಶಿಲ್ದಾರ್ ಈ ನಿರ್ಧಾರವನ್ನು ತೆಗೆದುಕೊಂಡರಾ ಅಂತ. ನಿನ್ನೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಈ ವಿಚಾರದಲ್ಲಿ ಕಣ್ಣನ್ ಅವರದ್ದು ಯಾವುದೇ ತಪ್ಪು ಇಲ್ಲ ಎಂದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ತಹಶಿಲ್ದಾರ್ ವಿರುದ್ಧ ಗರಂ ಆಗಿದ್ದಾರೆ. ಈ ಮೂಲಕ ನೋಟೀಸ್ ಕೊಟ್ಟು ತನಗೆ ದಂಡ ಹಾಕಿಸಿಕೊಂಡರಾ ತಹಶಿಲ್ದಾರ್ ಎಂಬ ಚರ್ಚೆ ನಡೆಯುತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್