Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಮೇಲೆ ನಂಬಿಕೆಯಿಡಿ.. ರಾಮನಗರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ : ಡಿಕೆ ಶಿವಕುಮಾರ್

Facebook
Twitter
Telegram
WhatsApp

ರಾಮನಗರ: ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಕನಕಪುರದ ಶಿವನಹಳ್ಳಿ ಗ್ರಾಮದ ದೇವಾಲಯ ಒಂದರ ಪೂಜೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಾಮನಗರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು ಜಿಲ್ಲೆಯವರು ನಾವೂ. ನಮ್ಮದು ರಾಮನಗರ ಅಲ್ಲ. ಯಾರೋ ಹೆಸರು ಮಾಡುವುದಕ್ಕೆ ಇದಕ್ಕೆ ರಾಮನಗರ ಎಂದು ಹೆಸರಿಟ್ಟಿದ್ದಾರೆ. ನನ್ನ ಮೇಲೆ ನಂಬಿಕೆ ಇಡಿ. ಮುಂದಿನ ದಿನಗಳಲ್ಲಿ ಬೆಂಗಳೂರು ಜಿಲ್ಲೆಗೆ ರಾಮನಗರವನ್ನು ಸೇರಿಸುತ್ತೇನೆ. ನೀವೂ ಬೆಂಗಳೂರು ಜಿಲ್ಲೆಯವರು, ರಾಮನಗರದವರಲ್ಲ ಎಂಬುದು ನಿಮ್ಮ ತಲೆಯಲ್ಲಿ ಇರಲಿ ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ. ಪ್ರತಿಬಾಡಿಗೆ ಲೆಕ್ಕ ಕಟ್ಟಲಾಗುತ್ತದೆ. ಆದ ಕಾರಣ ಎಲ್ಲರೂ ಈ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಿ. ಕನಕಪುರ ಬೆಂಗಳೂರಿಗೆ ಸೇರುತ್ತದೆ. ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ. ಉಪಮುಖ್ಯಮಂತ್ರಿ ಸ್ಥಾನ ಬೆಂಗಳೂರಿಗೆ ಸೀಮಿತ. ಇದು ನನ್ನ ಊರಿನ ಕೆಲಸ. ನಮ್ಮ ಕ್ಷೇತ್ರದ ಯಾವುದೇ ಕೆಲಸ ಇದ್ದರು ನಾವೂ ಹಿಂಜರಿಯುವುದಿಲ್ಲ. ಅದಕ್ಕೆ ಮೈಸೂರಿನಲ್ಲಿ ಇದ್ದರು, ನಮ್ಮ ಊರಿನ ಕೆಲಸಕ್ಕೆ ಬಂದಿದ್ದೇನೆ. ನಿಮ್ಮ ಜೇಬಿಗೆ ನೇರವಾಗಿ ಹಣ ಹಾಕುವುದಿಲ್ಲ. ಆದರೆ ನಿಮ್ಮ ಆಸ್ತಿ ಮೌಲ್ಯವನ್ನು ಹತ್ತುಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿಧ್ಯೆ ನೀಡಬಹುದು ಎಂದಿದ್ದಾರೆ. ಮಾತಿನ ನಡುವೆ ಪದೇ ಪದೇ ನಾವೂ ಬೆಂಗಳೂರು ಜಿಲ್ಲೆಯವರು ಎಂಬುದನ್ನು ಡಿಸಿಎಂ ಡಿಕೆ ಶಿವಕುಮಾರ್ ನೆನಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!