Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಭೆಯಲ್ಲಿ ತುಮಕೂರು ಶಾಸಕ – ಸಚಿವರ ಜಾಟಾಪಟಿ : ಕಾರಣವೇನು ಗೊತ್ತಾ..?

---Advertisement---

ತುಮಕೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆಯಿಂದ ಸಚಿವರು, ಶಾಸಕರ ಸಭೆ ಶುರುವಾಗಿದೆ. ಈ ಸಭೆಯಲ್ಲಿ ನಿನ್ನೆ ರಾತ್ರಿ ತುಮಕೂರಿನ ಸಚಿವರು, ಶಾಸಕರ ಸಭೆ ಆರಂಭವಾಗಿದೆ. ಆದರೆ ಸಭೆಯಲ್ಲಿಯೇ ತುಮಕೂರಿನ ಗುಭಿ ಶಾಸಕ ವಾಸು ಹಾಗೂ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ನಡುವೆ ಜೋರು ಜಟಾಪಟಿ ನಡೆದಿದೆ ಎನ್ನಲಾಗಿದೆ. ಸಭೆ ನಡೆಯುತ್ತಿರುವ ನಡುವಲ್ಲಿಯೇ ಹಾಲಿನ ವಿಚಾರ ಬಂದು ಗಲಾಟೆ ಆಗಿದೆ ಎನ್ನಲಾಗಿದೆ.

ಕಳೆದ ಕೆಲವು ತಿಂಗಳ ಹಿಂದೆ ನಡೆದ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಸಿಕ್ಕಾಪಟ್ಟೆ ಜಟಾಪಟಿ ನಡೆದಿತ್ತು. ಗುಬ್ಬಿ ವಾಸು ಅವರು ಆ ಸ್ಥಾನಕ್ಕೆ ತಮ್ಮ ಹೆಂಡತಿಯನ್ನು ಕೂರಿಸಬೇಕು ಅಂದುಕೊಂಡಿದ್ದರು. ಆದರೆ ರಾಜಣ್ಣ ಅವರು ಪಾವಗಡ ಶಾಸಕ ವೆಂಕಟೇಶ್ ಅವರಿಗೆ ಅಧ್ಯಕ್ಷ ಸ್ಥಾನ ಸಿಗುವಂತೆ ಮಾಡಿದ್ದರು. ಈ ಆಕ್ರೋಶ ರಾತ್ರಿ ಸಭೆಯಲ್ಲಿ ಕಟ್ಟೆಯೊಡೆದಿತ್ತು.

ಹಾಗೆ ಕುಣಿಗಲ್ ಶಾಸಕ ರಂಗನಾಥ್ ನೀರಿನ ವಿಚಾರಕ್ಕೆ ರಾಜಣ್ಣ ವಿರುದ್ಧ ಗರಂ ಆಗಿದ್ದರು. ಈ ಇಬ್ಬರ ಮಾತುಗಳು, ಆರೋಪಗಳನ್ನು ಕೇಳಿದ ರಾಜಣ್ಣ ಕೆಲ ಕಾಲ ಮೌನಿಯಾಗಿದ್ದರು, ಭಾವುಕರಾದ ಕ್ಷಣವೂ ಕಾಣಿಸಿತ್ತು. ಬಳಿಕ ಇದು ಅನಗತ್ಯ ಆರೋಪ ಅಂತಾನು ಗರಂ ಆದ್ರಂತೆ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು, ಮೂವರಿಗೂ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ. ಒಂದೇ ಜಿಲ್ಲೆಯವರಾಗಿ ಹೀಗೆ ಕಿತ್ತಾಡಿಕೊಂಡು ಕೂತರೆ ಹೇಗೆ..? ಮೊದಲು ಈ ಮನಸ್ತಾಪವನ್ನೆಲ್ಲಾ ಬಿಟ್ಟು ಎಲ್ಲರೂ ಒಂದಾಗಿ ಕೆಲಸ ಮಾಡಿ ಎಂದಿದ್ದಾರಂತೆ. ಸಿಎಂ ಸಂಧಾನ ಎಷ್ಟರಮಟ್ಟಿಗೆ ವರ್ಕೌಟ್ ಆಗುತ್ತೆ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment