ತುಮಕೂರು: ಜಿಲ್ಲೆಯ ಕ್ರೀಡಾಂಗಣಕ್ಕೆ ಈ ಮೊದಲು ಮಹಾತ್ಮ ಗಾಂಧಿ ಎಂಬ ಹೆಸರನ್ನಿಡಕಾಗಿತ್ತು. ಆದರೆ ಈಗ ಆ ಹೆಸರಿನ ಬದಲಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರ ಹೆಸರನ್ನ ಇಡಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಾ ಇದೆ. ಯಾಕಂದ್ರೆ ನರೇಗಾ ಯೋಜನೆಯಲ್ಲಿ ಮಹತ್ಮಾ ಗಾಂಧಿ ಹೆಸರನ್ನ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಿರುವಾಗ ತುಮಕೂರಿನಲ್ಲಿ ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಗೃಹ ಸಚಿವರ ಹೆಸರಿಟ್ಟಿದ್ದು, ಎಷ್ಟು ಸರಿ ಎಂಬ ವಿರೋಧವನ್ನ ಬಿಜೆಪಿ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.
ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಎಲ್ಲಾ ರಾಷ್ಟ್ರೀಯ ಹಬ್ಬಗಳು ಸೇರಿದಂತೆ ಪ್ರಮುಖ ಕಾರ್ಯಕ್ರಮಗಳು ನಡೆಯೋದು ಇಲ್ಲಿನೆ. ಇಲ್ಲಿನ ಒಳಾಂಗಣ ಕ್ರೀಡಾಂಗಣಕ್ಕೆ ಯಾವುದೇ ಅಧಿಕೃತ ಹೆಸರನ್ನ ಇಟ್ಟಿರಲಿಲ್ಲ. ಆದರೂ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣ ಎಂದೇ ಕರೆಯಲಾಗುತ್ತಿತ್ತು. ಆದರೆ ಈಗ ಒಳಾಂಗಣ ಕ್ರೀಡಾಂಗಣಕ್ಕೆ ಇದ್ದಕ್ಕಿದ್ದ ಹಾಗೇ ಗೃಹ ಸಚಿವರ ಹೆಸರನ್ನ ಇಡಲಾಗಿದೆ.
ತುಮಕೂರು ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಎಂದು ನಾಮಫಲಕ ಹಾಕಲಾಗಿದೆ. ಇದೀಗ ಈ ನಾಮಫಲಕ ವಿವಾದಕ್ಕೆ ಈಡಾಗಿದೆ. ಜಿಲ್ಲಾ ಬಿಜೆಪಿ ಘಟಕ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಪರಮೇಶ್ವರ್ ಅವರ ಹೆಸರನ್ನು ತೆಗೆದು ಹಾಕುವಂತೆ ಒತ್ತಾಯಿಸಿದೆ. ಮತ್ತೆ ಮಹಾತ್ಮಾ ಗಾಂಧಿ ಅವರ ಹೆಸರನ್ನೇ ಹಾಕುವಂತೆ ಒತ್ತಾಯಿಸಿದೆ. ಇದೇ ಜನವರಿ 16ರಿಂದ ರಾಜ್ಯಮಟ್ಟದ ಕ್ರೀಡಾಕೂಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಇಲ್ಲದೇ ಇದ್ದರೂ, ಅಧಿಕಾರಿಗಳು ನಾಮಫಲಕ ಬದಲಾಯಿಸಿರೋದು ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.


