Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಸೌಧ ಕಟ್ಟಡಕ್ಕೆ ಅರಿಶಿನ – ಕುಂಕುಮ ನಿಷೇಧ : ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಆಕ್ರೋಶ

---Advertisement---

 

ಬೆಂಗಳೂರು: ಆಯುಧ ಪೂಜೆ ಹತ್ತಿರವಾಗುತ್ತಿದೆ. ಆಯುಧ ಪೂಜೆ ಸಂದರ್ಭದಲ್ಲಿ ಅರಿಶಿನ, ಕುಂಕುಮವಿಟ್ಟು ಪೂಜೆ ಮಾಡಿ, ಕುಂಬಳಕಾಯಿ ಒಡೆಯುತ್ತಾರೆ. ಆದರೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಕುಂಕುಮ ಮತ್ತು ಅರಿಶಿನ ಬಳಕೆ ನಿಷೇಧ ಮಾಡಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗರಂ ಆಗಿದ್ದು, ಇಂಎಇಯಾ ಮೈತ್ರಿ ಪಕ್ಷಗಳ ನಡುವೆ ನೂರು ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಅವರು ಈ ನೆಲದ ಸ್ಥಳೀಯ ಸಂಸ್ಕೃತಿಯ ದ್ವೇಷ ಮತ್ತು ತಿರಸ್ಕಾರಗಳಲ್ಲಿ ಒಂದಾಗಿದ್ದಾರೆ. ವರ್ಷಗಳಿಂದ ದಕ್ಷಿಣ ಭಾರತದ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಉದ್ಯೋಗಿಗಳು ಆಯುಧ ಪೂಜೆಯನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ಮಹತ್ವ್ ಸಾಂಸ್ಕೃತಿಕ ಆಚರಣೆಗೆ ಇದೀಗ ಮೈತ್ರಿಕೂಟ ತಡೆಯುವ ಗುರಿಯನ್ನು ಹಾಕಿಕೊಂಡಿದೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment