ಕಂಗನಾ ದ್ವೇಷ, ಅವಿವೇಕದ ಏಜೆಂಟ್ : ಗಾಂಧೀಜಿ ಮರಿ ಮೊಮ್ಮಗ ಹೀಗಂದಿದ್ಯಾಕೆ ಗೊತ್ತಾ..?

ನವದೆಹಲಿ: ನಟಿ ಕಂಗನಾ ರಣಾವತ್ ಇತ್ತಿಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಯನ್ನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಸ್ವತಂತ್ರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ರು. ಇದೀಗ ಆ ಬಗ್ಗೆ ಗಾಂಧೀಜಿ ಮರಿ‌ ಮೊಮ್ಮಗ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಗಾಂಧೀಜಿ ಮರಿ ಮೊಮ್ಮಗ ಹಾಗೂ ಲೇಖಕ ತುಷಾರ್ ಗಾಂಧಿ, ಪದ್ಮಶ್ರೀ ಪುರಸ್ಕೃತೆ ಕಂಗನಾ ಈಗ ದ್ವೇಷ, ಅಸಹಿಷ್ಣುತೆ, ಅವಿವೇಕದ ಏಜೆಂಟ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.

2014 ರಿಂದ ದೇಶದಲ್ಲಿ ದ್ವೇಷ, ಕೋಮುವಾದ ಬಿತ್ತಲು ಕಂಗನಾ ಅಧಿಕೃತ ರಾಯಬಾರಿಯಾಗಿದ್ದಾರೆ. ನಮ್ಮ ದೇಶದಲ್ಲಿ ಸದ್ಯ ಪ್ರಧಾನ ಮಂತ್ರಿ ಕಚೇರಿಯೇ ದ್ವೇಷದ ಚಿಲುಮೆಯಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತಿಚೆಗಷ್ಟೇ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಕಂಗನಾ, 1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆಯಷ್ಟೇ. 2014 ರಲ್ಲಿ ಸಿಕ್ಕಿದ್ದು ನಿಜವಾದ ಸ್ವಾತಂತ್ರ್ಯ ಎಂದು ಪರೋಕ್ಷವಾಗಿ ಬಿಜೆಪಿ ಅಧಿಕಾರಕ್ಕೆ ಬಂದ ವಿಚಾರವನ್ನ ತಿಳಿಸಿದ್ರು. ಈ ವಿಚಾರಕ್ಕೆ ಸಾಕಷ್ಟು ಟೀಕೆ, ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಸಂಸದ ವರುಣ್ ಗಾಂಧಿ ಕೂಡ ಕಂಗನಾ ವಿರುದ್ಧ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಗಾಂಧೀಜಿ ಅವರ ಮರಿ‌ ಮೊಮ್ಮಗ ಕೂಡ ಕಂಗನಾ ಮಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *