Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನ ಮಕ್ಕಳಿಗೆ ಟಿವಿ ಮಾಧ್ಯಮಗಳೇ ಮೊದಲ ಪಾಠಶಾಲೆ ಎನ್ನುವಂತಾಗಿದೆ : ಸಂಸದ ಗೋವಿಂದ ಎಂ.ಕಾರಜೋಳ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ. 13 : ಇಂದು ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಟಿವಿ ಮಾಧ್ಯಮಗಳು ಹೆಚ್ಚಿನ ಪರಿಣಾಮ ಬೀರುತ್ತಿವೆ. ಇಂದಿನ ಮಕ್ಕಳಿಗೆ ಟಿವಿ ಮಾಧ್ಯಮಗಳೇ ಮೊದಲ ಪಾಠಶಾಲೆ ಎನ್ನುವಂತಾಗಿದೆ. ಮಾಧ್ಯಮಗಳ ಹೆಚ್ಚಿನ ಪ್ರಭಾವ ಬೀರುವ ಶಕ್ತಿ ಹೊಂದಿದ್ದು, ಇದು ಸಮಾಜದ ಏಳಿಗೆ ಬಳಕೆಯಾಗಲಿ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ “ಪತ್ರಿಕಾ ದಿನಾಚರಣೆ”ಯಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಮುಂದುವರೆದು ಮಾತನಾಡಿ, ಪತ್ರಿಕೆಗಳು ಸಮಾಜದ ಪ್ರತಿಬಿಂಬ ಹಾಗೂ ಪ್ರಜಾಪ್ರಭುತ್ವದ ರಕ್ಷಾ ಕವಚವಾಗಿ ಕಾರ್ಯನಿರ್ವಹಿಸುತ್ತಿವೆ.  ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿವೆ. ಕನ್ನಡ ನಾಡಿನ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪತ್ರಿಕೆಯನ್ನು 1843  ಜುಲೈ 1 ರಂದು ಪಾದ್ರಿ ಹರ್ಮನ್ ಮೋಗ್ಲಿಂಗ್ ಅವರು ಪ್ರಾರಂಭಿಸಿದರು. ಗೋಪಾಲಕೃಷ್ಣ ಗೋಖಲೆ ಹಾಗೂ ಬಾಲಗಂಗಾಧರ ತಿಲಕ್ ಬ್ರಿಟಿಷರ ದುರಾಡಳಿತ, ಬ್ರಿಟಿಷರು ಜನರಿಗೆ ಮಾಡುತ್ತಿರುವ ಶೋಷಣೆಯನ್ನು ಪತ್ರಿಕೆಗಳ ಮೂಲಕ ಜನರಿಗೆ ತಿಳಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ ಮಹಾತ್ಮ ಗಾಂಧೀಜಿ “ಯಂಗ್ ಇಂಡಿಯಾ” ಹಾಗೂ “ಹರಿಜನ” ಪತ್ರಿಕೆಗಳನ್ನು ಆರಂಭಿಸಿದರು. ಇದರ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಪತ್ರಿಕೆ ಆರಂಭಿಸಿದರು.

ಅಂಬೇಡ್ಕರ್ ಸಹ “ಮೂಕನಾಯಕ” ಹಾಗೂ “ಬಹಿಷ್ಕøತ ಸಮಾಜ” ಪತ್ರಿಕೆಗಳ ಮೂಲಕ ದೀನ ದಲಿತರನ್ನು ಸಂಘಟಿಸಿ ಅಭಿವೃದ್ಧಿ ಪಥದ ಕಡೆಗೆ ಮುನ್ನಡಿಸಿದರು. ಸ್ವಾತಂತ್ರ್ಯ ನಂತರ ಮಾಜಿ ಪ್ರಧಾನಿ ನೆಹರು ಅವರ ಮೊದಲ ಸಚಿವ ಸಂಪುಟದಲ್ಲಿ ಖ್ಯಾತ ಪತ್ರಕರ್ತ ರಂಗರಾವ್ ದಿವಾಕರ್ ಸಹಿತ ಒಬ್ಬರು ಆಗಿದ್ದರು. ರಾಜ್ಯದಿಂದ ಸಂಸದರಾಗಿ ಆಯ್ಕೆಯಾಗಿದ್ದ ಪಾಟೀಲ್ ಪುಟ್ಟಪ್ಪನವರು ಸಹ ವಿಶ್ವವಾಣಿ ದಿನಪತ್ರಿಕೆ ಹಾಗೂ ಪ್ರಪಂಚ ಎನ್ನುವ ವಾರ ಪತ್ರಿಕೆಗಳ ಸಂಪಾದಕರಾಗಿದ್ದರು ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!