ಬೆಂಗಳೂರಿನ ನಾಯಂಡಹಳ್ಳಿ ಬಳಿಯ ನಂದಿ ಲಿಂಕ್ ಗ್ರೌಂಡ್ನಲ್ಲಿ ಮೂರು ದಿನಗಳ ಕಾಲ ಪ್ರಾಪರ್ಟಿ ಎಕ್ಸ್ಪೋ ನಡೆಯಲಿದೆ. ಟಿವಿ9 ಕನ್ನಡ ಸ್ವೀಟ್ ಹೋಮ್ನಿಂದ ನವೆಂಬರ್ 15ರಿಂದ 17ರವರೆಗೆ ರಿಯಲ್ ಎಸ್ಟೇಟ್ ಎಕ್ಸ್ಪೋ ಆಯೋಜನೆ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರಮುಖ ಲ್ಯಾಂಡ್ ಡೆವಲಪರ್ಗಳ ವಿವಿಧ ಪ್ರಾಜೆಕ್ಟ್ಗಳನ್ನು ಒಂದೇ ವೇದಿಕೆಯಲ್ಲಿ ಕಾಣಬಹುದು.
ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವುದು ಜೀವಮಾನದ ಸಾಧನೆ ಎಂಬಂತಾಗಿದೆ. ಥರಹೇವಾರಿ ಬಿಸಿನೆಸ್ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್ಗಳ ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್ಗಳು ಈ ಎಕ್ಸ್ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.
ಕಳೆದ ವರ್ಷ (2023ರ ಸೆಪ್ಟೆಂಬರ್) ನಡೆದ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಬೆಂಗಳೂರಿಗರು ಭರ್ಜರಿ ಸ್ಪಂದನೆ ನೀಡಿದ್ದರು. 20,000ಕ್ಕೂ ಹೆಚ್ಚು ಜನರು ಎಕ್ಸ್ಪೋಗೆ ಬಂದು ಹೋಗಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಅದೊಂದು ಹೊಸ ಮೈಲಿಗಲ್ಲಿನಂತಾಗಿತ್ತು. ಈ ವರ್ಷದ ಎಕ್ಸ್ಪೋ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನವೆಂಬರ್ 15, 16 ಮತ್ತು 17ರಂದು ನಡೆಯಲಿದೆ.
ವಿವಿಧ ಬೆಲೆಸ್ತರಗಳಲ್ಲಿ ಲಕ್ಷುರಿ ವಿಲ್ಲಾ, ಪ್ಲಾಟ್, ಅಪಾರ್ಟ್ಮೆಂಟ್, ಫಾರ್ಮ್ಲ್ಯಾಂಡ್ಗಳನ್ನು ಒಂದೇ ಸ್ಥಳದಲ್ಲಿ ಮಾಹಿತಿ ಪಡೆದು ಅವಲೋಕಿಸಬಹುದು.
ಉದ್ಯಮದ ತಜ್ಞರು, ಪ್ರಾಪರ್ಟಿ ಕನ್ಸಲ್ಟೆಂಟ್, ಲೀಗಲ್ ಅಡ್ವೈಸರ್ಗಳೆಲ್ಲರೂ ಸ್ಥಳದಲ್ಲಿ ನೆರವಿಗೆ ಲಭ್ಯವಿರುತ್ತಾರೆ.
ಎಕ್ಸ್ಪೋದಲ್ಲಿ ನೀವು ಪ್ರಾಪರ್ಟಿ ಖರೀದಿಗೆ ನೊಂದಾಯಿಸಿದರೆ ವಿಶೇಷ ರಿಯಾಯಿತಿ, ಆಕರ್ಷಕ ಪಾವತಿ ಅವಕಾಶ ಮತ್ತಿತರ ಎಕ್ಸ್ಕ್ಲೂಸಿವ್ ಆಫರ್ಗಳನ್ನು ಪಡೆಯಬಹುದು.
ಇತರ ಹೂಡಿಕೆದಾರರೊಂದಿಗೆ ಮಾತನಾಡಬಹುದು, ವೃತ್ತಿಪರರೊಂದಿಗೆ ಸಮಾಲೋಚಿಸಬಹುದು. ಹೀಗೆ ನಾನಾ ಅವಕಾಶಗಳುಂಟು.
ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್ಪೋ ಖಂಡಿತ ತಪ್ಪಿಸಿಕೊಳ್ಳಬೇಡಿ…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…