ಅಯ್ಯಪ್ಪನ ಚಿನ್ನದ ಕದ್ದ ಕೇಸ್ ಗೆ ಟ್ವಿಸ್ಟ್ : ಬೆಂಗಳೂರು, ಬಳ್ಳಾರಿಯಲ್ಲಿ ಶೋಧ..!

1 Min Read

ಅಯ್ಯಪ್ಪನೆಂದರೆ ಭಯ, ಭಕ್ತಿ.. ಆದರೆ ಅಯ್ಯಪ್ಪನ ಗುಡಿಗೆ ಅಲಂಕರಿಸಿದ್ದ ಚಿನ್ನಕ್ಕೇನೆ ಖದೀಮರು ಕನ್ನ ಹಾಕಿದ್ದಾರೆ. ಇದೀಗ ಎಸ್ಐಟಿ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿಸಿದ್ದು, ಬೆಂಗಳೂರು, ಬಳ್ಳರಿ ಜಿಲ್ಲೆಯಲ್ಲೂ ಸರ್ಚಿಂಗ್ ಶುರು ಮಡಿದ್ದಾರೆ. ಅದರಲ್ಲೂ ದೇವಸ್ಥಾನದ ಅರ್ಚಕ ಉನ್ನಿಕೃಷ್ಣನ್ ಪೊಟ್ಟಿಯ ಹಿಂದೆ ಬಿದ್ದಿರೋ ಎಸ್ಐಟಿಗೆ ಮತ್ತೊಂದು ಲಿಂಕ್ ಸಿಕ್ಕಿದೆ.

ಹೀಗಾಗಿ ಕೇರಳದಿಂದ ಹೊರಟ ಎಸ್ಐಟಿ ನೇರವಾಗಿ ಬೆಂಗಳೂರಿನಲ್ಲಿರುವ ಅರ್ಚಕ ಉನ್ನಿ ಕೃಷ್ಣನ್ ಪೊಟ್ಟಿ ಮನೆಗೆ ಭೇಟಿ ನೀಡಿದೆ. ಶ್ರೀರಾಮಪುರದ ಚೌಡೇಶ್ವರಿ ದೇವಸ್ಥಾನದ ಬಳಿ ಇರುವ ಮನೆಯಲ್ಲಿ ಬೆಳಗ್ಗೆಯಿಂದಾನು ಪರಿಶೀಲನೆ ನಡೆಸಿದ್ದಾರೆ. ಹಣ, ಚಿನ್ನಾಭರಣ ಮತ್ತು ಆಸ್ತಿ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ಅಯ್ಯಪ್ಪನ ಬಳಿ ಕದ್ದಂತ ಚಿನ್ನದಲ್ಲಿ 476 ಗ್ರಾಂ ಚಿನ್ನವನ್ನು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಶಾಪ್ ಮಾಲೀಕ ಗೋವರ್ಧನ್ ಖರೀದಿಸಿದ್ದರಂತೆ. ಈ ರೊದ್ದಂ ಶಾಪ್ ಮೇಲೆ ಎಸ್ಐಟಿ ದಾಳಿ ಮಾಡಿ ಶೋಧ ಕಾರ್ಯ ನಡೆಸಿದೆ.

ಗೋವರ್ಧನ್ ಗೆ ಎಸ್ಐಟಿಗೆ ವಿಚಾರಣೆ ಮಾಡಿದ್ದು, ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. 2019ರಲ್ಲಿ ಟ್ರಾವಂಕೂರ್ ದೇವಸ್ವಂ ಬೋರ್ಡ್, 42.8 ಕೆಜಿ ತೂಕದ ವಸ್ತುಗಳನ್ನ ಚೆನ್ನೈನಲ್ಲಿರುವ ಉನ್ನಿಕೃಷ್ಣನ್ ಪೊಟ್ಟಿಗೆ ಹಸ್ತಾಂತರಿಸಿತ್ತು. ಚಿನ್ನ ಲೇಪಿತ ತಾಮ್ರದ ತಟ್ಟೆಗಳನ್ನು ಮತ್ತೆ ದೇವಸ್ಥಾನಕ್ಕೆ ತಂದಾಗ, ಅವುಗಳ ತೂಕವು 38.258 ಕೆಜಿಗೆ ಇಳಿಕೆಯಾಗಿತ್ತು. ಉಳಿದಿದ್ದ ಹೆಚ್ಚುವರಿ 4 ಕೆಜಿ ಚಿನ್ನ ಎಲ್ಲಿದೆ ಎಂಬ ವಿಚಾರವಾಗಿ SIT ತನಿಖೆ ನಡೆಸುತ್ತಿದೆ. ಉನ್ನಿಕೃಷ್ಣನ್ ಪೊಟ್ಟಿ ದಕ್ಷಿಣ ಭಾರತದ ರಾಜ್ಯಗಳ ಹಲವು ದೇವಾಲಯಗಳಿಗೆ ಸಾಗಿಸಿರೋದು ಬೆಳಕಿಗೆ ಬಂದಿದೆ. ಇನ್ನಷ್ಟು ವಿಚಾರಣೆಯನ್ನು ನಡೆಸುತ್ತಿದ್ದಾರೆ.

Share This Article