Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಕ್ಸಲರ ಶರಣಾಗತಿಯಲ್ಲಿ ಟ್ವಿಸ್ಟ್ : ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಈ ಬದಲಾವಣೆ..!

---Advertisement---

ಬೆಂಗಳೂರು: ಕಾಡಿನ ಮಧ್ಯೆ ಅಡಗಿ ರಕ್ಯಚರಿತ್ರೆ ಬರೆಯುತ್ತಿದ್ದ ನಕ್ಸಲರನ್ನು ಮುಖ್ಯ ವಾಹಿನಿಗೆ ಕರೆತರುವಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ ಮನವೊಲಿಸಿ, ಶರಣಾಗಲು ಹೇಳಿದ್ದರು. ಅದು ಸಕ್ಸಸ್ ಕೂಡ ಆಗಿದೆ. ಈಗಾಗಲೇ ಕಾಡಿನಿಂದ ಬಿಟ್ಟಿರುವ ಆರು ನಕ್ಸಲರು ಕಡೆ ಗಳಿಗೆಯಲ್ಲಿ ಟ್ವಿಸ್ಟ್ ಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲಾಡಳಿತ ಬಿಗಿ ಭದ್ರತೆಯೊಂದಿಗೆ ತಯಾರಿ ಮಾಡಿಕೊಂಡಿತ್ತು. ಆದರೆ ಈಗ ಬೇರೆಯೊಂದು ಬೇಡಿಕೆ ಇಟ್ಟಿದ್ದರು.

ಚಿಕ್ಕಮಗಳೂರು ಜಿಲ್ಲಾಡಳಿತದ ಬದಲಿಗೆ ಸಿಎಂ ಸಿದ್ದರಾಮಯ್ಯ ಅವರ ಎದುರೇ ನಾವೂ ಶರಣಾಗುತ್ತೀವಿ ಎಂದಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಒಪ್ಪಿಗೆ ಸೂಚಿಸಿದ್ದು, ಸಿಎಂ ಕಚೇರಿಯಲ್ಲಿಯೇ ಆರು ಜನ ನಕ್ಸಲರು ಸಿಎಂ ಗೃಹ ಕಚೇರಿಯಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನಿಂದ ಈಗ ಬೆಂಗಳೂರಿನ ಕಡೆಗೆ ಹೊರಟಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಕ್ಸಲರು ಸಿಎಂ ಕಚೇರಿಯಲ್ಲಿ ಶರಣಾಗುತ್ತಿರುವುದು.

ಶೃಂಗೇರಿಯ ಮುಂಡಗಾರು ಲತಾ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರಿನ ಸುಂದರಿ, ಬಾಳೆಹೊಳೆಯ ವನಜಾಕ್ಷಿ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಅಲಿಯಾಸ್ ಜಯಣ್ಣ, ತಮಿಳುನಾಡಿನ ಕೆ.ವಸಂತ, ಕೇರಳದ ಟಿ.ಎನ್.ಜೀಶಾ ಇಂದು ಶರಣಾಗುತ್ತಿರುವ ನಕ್ಸಲರಾಗಿದ್ದಾರೆ. ಇನ್ನು ಶೃಂಗೇರಿ ತಾಲೂಕಿನ ಕಿಗ್ಗಾ ಮೂಲದ ರವಿ ಎಂಬಾತ ಮಾತ್ರ ಶರಣಾಗುವುದಕ್ಕೆ ಬಾಕಿ ಇದೆ. ಈಗಾಗಲೇ ಆತನನ್ನು ಶರಣಾಗಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ. ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಉಳಿದ ನಕ್ಸಲರ ಶರಣಾಗತಿಗೆ ವೇಗ ಸಿಕ್ಕಿತ್ತು. ಸದ್ಯ ನಕ್ಸಲರ ಶರಣಾಗತಿಯ ಪ್ರಯತ್ನ ಯಶಸ್ವಿಯಾಗುತ್ತಿದೆ. ಆರು ಜನ ನಕ್ಸಲರು ಹಲವು ಬೇಡಿಕೆಗಳನ್ನಿಟ್ಟು ಸಿಎಂ ಸಿದ್ದರಾಮಯ್ಯ ಅವರ ಮುಂದೆಯೇ ಶರಣಾಗುವುದಕ್ಕೆ ಬೆಂಗಳೂರಿಗೆ ಬರುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...