Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

---Advertisement---

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಆದರೆ ನಿನ್ನೆ ಸುರಿದ ಭಾರಿ ಮಳೆಗೆ ರೈತರ ಬೆಳೆ ನಾಶವಾಗಿದೆ.

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಯಲ್ಲಿ ರೈತರು ಬೆಳೆದಂತ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ‌. ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಈ ಘಟನೆ ನಡೆದಿದೆ. ರೈತ ಶಿವ ಪ್ರಸಾದ್ ಹಾಗೂ ಚಂದನ್ ಎಂಬುವವರ ಜಮೀನಿನಲ್ಲಿ ಬೆಳೆದ ಬೆಳೆ ನಾಶವಾಗಿದೆ. ಬೇಳೆ ತೋಟ ಸಂಪೂರ್ಣವಾಗಿ ನೆಲ ಕಚ್ಚಿದೆ.

ಅಷ್ಟೇ ಅಲ್ಲ ಬಂಗಾರಪೇಟೆಯ ಹುಣಕಲ್ ದೊಡ್ಡಿ ಗ್ರಾಮದ ಮುನಿರಾಜು ಎಂಬುವವರಿಗೆ ಸೇರಿದ ಹಾಗಲಕಾಯಿ ಹಾಗೂ ಸೋರೆಕಾಯಿ ಬೆಳೆಗೂ ಹಾನಿಯಾಗಿದೆ. ಜಿಲ್ಲೆಯಲ್ಲಿ ಹಲವು ರೈತರಿಗೆ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ. ಈ ಬಾರಿಯ ರಣ ಬಿಸಿಲಿನಲ್ಲೂ ಹಾಗೋ ಹೀಗೋ ಕಷ್ಟ ಪಟ್ಟು ಬೆಳೆ ಬೆಳೆದಿದ್ದರು. ಮಳೆ ಇಲ್ಲದೆ ಹೋದರೂ ಉಳಿಸಿಕೊಂಡಿದ್ದರು. ಆದರೆ ಮಳೆ ಬಂದು ಎಲ್ಲವನ್ನು ಹಾಳು ಮಾಡಿದೆ. ಇದು ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾಲ ಸೋಲ ಮಾಡಿದ ಬೆಳೆದ ಬೆಳೆಗೆ ನೀರಿಲ್ಲ ಅಂತ ಒದ್ದಾಡುತ್ತಿರುವಾಗ, ಕರುಣೆ ತೋರಿ ಮಳೆರಾಯ ಬಂದಿದ್ದಾನೆ. ಆದರೆ ಬಿರುಗಾಳಿ ಸಮೇತ ಬಂದು, ಎಲ್ಲವನ್ನು ಹಾನಿ ಮಾಡಿದೆ. ಇದರಿಂದ ಲಕ್ಷಾಂತರ ರೂಪಾಯಿ ಬೆಳೆಯೂ ಕೈ ಸೇರಿದೆ ಭೂಮಿ ಪಾಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...