Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳಿಗಾಲದ ಅಧಿವೇಶನಕ್ಕೆ ಗೈರಾದ ಇಬ್ಬರು ಮಾಜಿ ಸಚಿವರು ಗುಪ್ತ ಸಭೆ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆ ಎಸ್ ಈಶ್ಚರಪ್ಪ ಅವರು ಪಾಡು ಅಷ್ಟಿಷ್ಟಲ್ಲ. ತಮ್ಮ ಮೇಲಿನ ಪ್ರಕರಣಕ್ಕೆ ಕ್ಲೀನ್ ಚಿಟ್ ಸಿಕ್ಕರು ಸಚಿವ ಸ್ಥಾನ ಸಿಗದೆ ಇದ್ದದ್ದಕ್ಕೆ ತುಂಬಾ ಸಂಕಟ ಪಡುತ್ತಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದರು ಕೂಡ, ಅಧಿವೇಶನಕ್ಕೆ ಗೈರಾಗಿ ಇಬ್ಬರು ಗುಪ್ತ ಸಭೆ ನಡೆಸಿದ್ದಾರೆ.

ಸ್ಪೀಕರ್ ಗೆ ಅಧಿವೇಶನಕ್ಕೆ ಗೈರಾಗುವ ಬಗ್ಗೆ ಪತ್ರ ಬರೆದಿದ್ದು, ರಮೇಶ್ ಜಾರಕಿಹೊಳಿ ಹಾಗೂ ಈಶ್ಚರಪ್ಪ ಇಬ್ಬರು ವಿಮಾನ ಹತ್ತಿದ್ದಾರೆ. ಒಂದೇ ವಿಮಾನದಲ್ಲಿ ಪಯಣ ಬೆಳೆಸಿದ್ದಾರೆ. ಈ ವೇಳೆ ಮಾಧ್ಯಮದವರು ಪ್ರಶ್ನೆಗೆ, ನಾನು ಜೂನಿಯರ್, ಈಶ್ವರಪ್ಪ ಅವರು ಸೀನಿಯರ್ ಅದಾರೆ. ವಿಚಾರ ಏನು ಅಂತ ಅವರನ್ನೇ ಕೇಳಿ ಅಂತ ಜಾರಿಕೊಂಡಿದ್ದಾರೆ. ಸೀದಾ ಅಲ್ಲಿಂದ ಬೆಂಗಳೂರಿಹೆ ಬಂದಿದ್ದು, ರಹಸ್ಯ ಸಭೆ ನಡೆಸಿದ್ದಾರೆ. ಇವರ ಜೊತೆಗೆ ಸಿ ಪಿ ಯೋಗಿಶ್ವರ್ ಸೇರುವ ಸಾಧ್ಯತೆಯೂ ಇದೆ.

ಚುನಾವಣೆ ಇನ್ನು ನಾಲ್ಕು ತಿಂಗಳು ಮಾತ್ರ ಇದೆ. ಆದ್ರೆ ಚುನಾವಣೆಗೂ ಮುನ್ನ ಮೂರು ತಿಂಗಳಾದರೂ ಸರಿ ಸಚಿವರಾಗಲೇಬೇಕೆಂಬುದು ಸಿಪಿ ಯೋಗೀಶ್ವರ್ ಹಠ. ಅತ್ತ ಗುತ್ತಿಗೆದಾರರಿಂದ ಕಮಿಷನ್ ತೆಗೆದುಕೊಳ್ಳುವ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕರೂ ಮತ್ತೆ ಸಚಿವ ಸ್ಥಾನ ನೀಡುತ್ತಿಲ್ಲ ಅಂತ ಈಶ್ಚರಪ್ಪ. ಮತ್ತೊಂದು ಕಡೆ ಸಿಡಿ ಕೇಸ್ ನಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಕೂಡ ಸಚಿವ ಸ್ಥಾನದ ಆಕಾಂಕ್ಷಿ.

ಮತ್ತೊಂದು ಕಡೆ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸಿಎಂ ಬೊಮ್ಮಾಯಿ ಅವರು ಹೈಕಮಾಂಡ್ ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರಾ ಎಂಬ ಅನುಮಾನ. ಜೊತೆಗೆ ಚುನಾವಣೆ ಹತ್ತಿರವಿರುವ ಕಾರಣ ಪ್ರಚಾರದಲ್ಲೂ ಪಕ್ಷ ಬ್ಯುಸಿಯಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!