Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ಹಗರಣ ಇಬ್ಬರು ಹಾಲಿ, ಒಬ್ಬರು ಮಾಜಿ ಶಾಸಕರಿಗೆ ಸಂಕಷ್ಟ : ಪ್ರಕರಣದ ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

ಮಂಡ್ಯ: ಮುಡಾಡದಲ್ಲಿ ನಡೆದ ಕೋಟಿ ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಹಾಲಿ ಶಾಸಕರು ಹಾಗೂ ಒಬ್ಬ ಮಾಜಿ ಶಾಸಕ ಸೇರಿದಂತೆ 24 ಮಂದಿಗೆ ಭಯ ಶುರುವಾಗಿದೆ. ಸದ್ಯ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ತೀರ್ಪು ಬಂದರೆ ಮೂವರು ರಾಜಕಾರಣಿಗಳು ಚುನಾವಣೆಗೆ ನಿಲ್ಲುವ ಅವಕಾಶವನ್ನೇ ಕಳೆದುಕೊಳ್ಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಸೆ.15ಕ್ಕೆ ಕೋರ್ಟ್ ತೀರ್ಪು ನೀಡಲಿದೆ. ಯಾವ ರೀತಿಯ ತೀರ್ಪು ಬರಲಿದೆ ಎಂಬ ಕಾತುರ ಎಲ್ಲರಿಗೂ ಇದ್ದಂತಿದೆ.

ಏನಿದು ಪ್ರಕರಣ..?

ಈ ಪ್ರಕರಣ ನಡೆದದ್ದು 2009ರಲ್ಲಿ. ಮಂಡ್ಯ ನಗರಾಭಿವೃದ್ದಿಯಿಂದ ನಿವೇಶನಗಳ ಹಂಚಿಕೆಯಾಗಿತ್ತು. ಆದರೆ ಅಂದಿನ ನಗರಾಭಿವೃದ್ಧಿ ಅಧ್ಯಕ್ಷರಾಗಿದ್ದಂತ ವಿದ್ಯಾನಾಗೇಂದ್ರ, ಶಾಸಕ ಎಂ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು ಸೇರಿದಂತೆ ಹಲವರು ತಮಗೆ ಬೇಕಾದವರಿಗೆ ನಿಯಮ ಮೀರಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಎದುರಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಮಂಡ್ಯದ ವಕೀಲ ಸತ್ಯಾನಂದ ದಾಖಲೆ ಸಮೇತ ದೂರು ಸಲ್ಲಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 7 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಅದರಲ್ಲಿ 24 ಆರೋಪಿಗಳ ಬಗ್ಗೆ ಉಲ್ಲೇಖವಿತ್ತು.

ತಮ್ಮ ಮೇಲಿನ ಪ್ರಕರಣವನ್ನ ವಜಾಗೊಳಿಸುವಂತೆ ಶಾಸಕ ಸಿ.ಎಸ್.ಪುಟ್ಟರಾಜು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ 2022 ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದ್ದು, ಮಧ್ಯಪ್ರವೇಶಕ್ಕೆ ನಿರಾಕರಣೆ ಮಾಡಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.15ಕ್ಕೆ ತೀರ್ಪು ನೀಡಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!