Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಹೋದ ಇಬ್ಬರು ಸಾವು..!

Facebook
Twitter
Telegram
WhatsApp

ಶಿವಮೊಗ್ಗ: ಹೊಸ ವರುಷ.. ಹೊಸ ಹರುಷ ತರಲೆಂದು ಎಲ್ಲರೂ ಈ ವರ್ಷವನ್ನು ಬಹಳ ಸಂತಸದಿಂದ ಬರಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಭಯದಿಂದ ಯಾರು ಕೀಡ ಸರಿಯಾಗಿ ನ್ಯೂ ಇಯರ್ ಸೆಲೆಬ್ರೇಷನ್ ಮಾಡಲು ಆಗಿರಲಿಲ್ಲ. ಹೀಗಾಗಿ ಈ ವರ್ಷ ಎಲ್ಲರೂ ಪಾರ್ಟಿ ಮಾಡುವ ಮೂಲಕ ನ್ಯೂ ಇಯರ್ ವೆಲ್ ಕಂ ಮಾಡಿದ್ದಾರೆ. ಇದೇ ಎಂಜಾಯ್ಮೆಂಟ್ ಮೂಡ್ ಇಬ್ಬರ ಸಾವಿಗೆ ಕಾರಣವಾಗಿದೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಗ್ಲಾಸ್ ಹೌಸ್ ಬಳಿ ಪಾರ್ಟಿ ಮಾಡಲು ಹೋದ ಇಬ್ಬರು ಬಲಿಯಾಗಿದ್ದಾರೆ. 36 ವರ್ಷದ ವಿನಯ್ ಪಿಡ್ಲ್ಯೂಡಿ ಕ್ವಾರ್ಟಸ್ ನಲ್ಲಿ ವಾಸವಾಗಿದ್ದರು. ದಾವಣಗೆರೆ ವಿವಿಯಲ್ಲಿ ಕನ್ನಡ ಪಿಎಚ್ಡಿ ಕೂಡ ಮಾಡುತ್ತಿದ್ದರು. ಮಂಜುನಾತ್ ಓಲೇಕಾರ್ ಎಂಬುವವರ ಮನೆಗೆ ಹೊಸ ವರ್ಷಾಚರಣೆಗೆಂದು ಹೋಗಿದ್ದರು.

ಈ ವೇಳೆ ಮಂಜುನಾಥ್ ಸರಿಯಾಗಿ 12 ಗಂಟೆಗೆ ನ್ಯೂ ಇಯರ್ ಬರಮಾಡಿಕೊಳ್ಳಲು ತಮ್ಮ ಬಳಿ ಇದ್ದ ಗನ್ ನಿಂದ ಗುಂಡು ಹಾರಿಸಿದ್ದಾರೆ. ಆದರೆ ಆ ಗುಂಡು ನೇರವಾಗಿ ವಿನಯ್ ಹೊಟ್ಟೆಗೆ ತಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿತ್ತಾದರೂ, ಬದುಕುಳಿದಿಲ್ಲ. ಅದೇ ಭಯದಲ್ಲಿ ಮಂಜುನಾಥ್ ಗೆ ಹೃದಯಾಘಾತವಾಗಿದೆ. ಮಂಜುನಾಥ್ ಕೂಡ ಹೊಸ ವರ್ಷದ ದಿನವೇ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!