Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಪಾನ್ ನಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ : ತಪ್ಪಿದ ಬಾರೀ ದುರಂತ

Facebook
Twitter
Telegram
WhatsApp

 

ಸುದ್ದಿಒನ್ : ಭೂಕಂಪದ ದುರಂತದಿಂದ ಜಪಾನ್ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ರಾಜಧಾನಿ ಟೋಕಿಯೊ ಸಮೀಪದ ಹನೆಡಾ ವಿಮಾನ ನಿಲ್ದಾಣದಲ್ಲಿ ಭಾರಿ ಅಪಘಾತ ಸಂಭವಿಸಿದೆ.

ಲ್ಯಾಂಡಿಂಗ್ ನಂತರ, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಲ್ಲಿ ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು ಉರಿಯಿತು. ಈ ಘಟನೆಯಲ್ಲಿ ಐವರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಅದೃಷ್ಟವಶಾತ್  ಅಪಘಾತಕ್ಕೀಡಾದ ಇನ್ನೊಂದು ವಿಮಾನದ ಎಲ್ಲಾ 379 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯ ದೂರದರ್ಶನವು ದೃಶ್ಯಾವಳಿಗಳನ್ನು ಪ್ರಸಾರ ಮಾಡಿದೆ. ಜಪಾನ್ ಏರ್‌ಲೈನ್ಸ್ ವಿಮಾನವು ರನ್‌ವೇ ಮೇಲೆ ಇಳಿದ ನಂತರ ಬಾರಿ ಬೆಂಕಿ ಕಾಣಿಸಿಕೊಂಡಿದೆ. ಜಪಾನ್ ಏರ್‌ಲೈನ್ಸ್ ಫ್ಲೈಟ್ 516 ಜಪಾನ್‌ನ ಶಿನ್ ಚಿಟೋಸ್ ವಿಮಾನ ನಿಲ್ದಾಣದಿಂದ ಹನೆಡಾಗೆ ಆಗಮಿಸಿದಾಗ ಈ ಘಟನೆ ನಡೆದಿದೆ. ಅಪಘಾತ ಸಂಭವಿಸಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಜಪಾನ್ ಏರ್‌ಲೈನ್ಸ್ ವಿಮಾನವು ರನ್‌ವೇಯಲ್ಲಿ ನಿಂತಿದ್ದ ಜಪಾನಿನ ಕೋಸ್ಟ್ ಗಾರ್ಡ್ ವಿಮಾನಕ್ಕೆ ಅಪ್ಪಳಿಸಿತು ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಘರ್ಷಣೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಎರಡು ವಿಮಾನಗಳು ಹೇಗೆ ಮತ್ತು ಯಾವ ಸಮಯದಲ್ಲಿ ಪರಸ್ಪರ ಡಿಕ್ಕಿಯಾದವು ಎಂಬುದನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಕೋಸ್ಟ್‌ಗಾರ್ಡ್ ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!