Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದ್ವಿಚಕ್ರ ವಾಹನ, ಹೊಲಿಗೆಯಂತ್ರ, ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.27): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.

ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 9 ಮಂದಿ ಅಂಗವಿಕಲ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಲಾಯಿತು.

ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಯಡಿ 4 ಮಂದಿ ದೈಹಿಕ  ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಯೋಜನೆಯಡಿ 3 ಮಂದಿ ಶ್ರವಣದೋಷ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಇಬ್ಬರು ದೃಷ್ಠಿದೋಷ ಹೊಂದಿರುವ ಅಂಗವಿಕಲರಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಅನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್‍ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ಅಂಗವಿಕಲ ಫಲಾನುಭವಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಸೌಲಭ್ಯ ವಿತರಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...