ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 09 : ಚಳ್ಳಕೆರೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳನನ್ನು ಬಂಧಿಸಿ 37 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹಿರಿಯೂರು ತಾಲೂಕಿನ ಮಹಮ್ಮದ್ ಶರೀಫ್ ಎಂಬಾತನನ್ನು ಬಂಧಿಸಿ ಸುಮಾರು 14 ಲಕ್ಷದ ಮೌಲ್ಯದ 37 ವಿವಿಧ ಕಂಪನಿಯ ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದ ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಂಗಳೂರು, ದಾವಣಗೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಸೇರಿದಂತೆ 28 ವಿವಿಧ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು ಚಳ್ಳಕೆರೆ ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಭಂಡಾರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಭಂಡಾರು ಹಾಗೂ ಹೆಚ್ಚುವರಿ ಎಸ್ ಪಿ ಆರ್ ಶಿವಕುಮಾರ್, ಚಳ್ಳಕೆರೆ ಪ್ರಭಾರ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್, ಡಿವೈಎಸ್ಪಿ ಸತ್ಯನಾರಾಯಣರಾವ್ ಮಾರ್ಗದರ್ಶನದಲ್ಲಿ ಪಿಎಸ್ಐ ಗಳಾದ ಈರೇಶ್ ಜಿ ಶಿವರಾಜ್ ದರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.
ಕಾರ್ಯಚರಣೆ ವೇಳೆ ಪೊಲೀಸ್ ಸಿಬ್ಬಂದಿಗಳಾದ ಎ ಎಸ್ ಐ ರಾಘವ ರೆಡ್ಡಿ ಪೇದೆಗಳಾದ ವಸಂತ್ ಕುಮಾರ್ ವೆಂಕಟೇಶ್ ಶ್ರೀನಿವಾಸ ಶಿವಕುಮಾರ್ ಮಂಜುನಾಥ ಪರಶುರಾಮ ಶ್ರೀಧರ ರಮೇಶ್ ಬಾರ್ಕಿ ಅಶೋಕ್ ರೆಡ್ಡಿ ಮಂಜುನಾಥ್ ತಿರುಕಪ್ಪ ತಳವಾರ್ ಬಸವರಾಜ್ ಭಾಗವಹಿಸಿದ್ದರು.




