Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಸ್ಯೆ ಬಗೆಹರಿಸಬೇಕಾದ ಸಿಎಂ ಸಿನಿಮಾ ಟ್ರೇಲರ್ ಲಾಂಚ್ ಗೆ ಹೋಗ್ತಾರೆ : ಯು ಟಿ ಖಾದರ್ ಕಿಡಿ

Facebook
Twitter
Telegram
WhatsApp

ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟೆ ಬಳಿ ಬಸ್ ದುರಂತ ಪ್ರಕರಣವನ್ನ ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಯು ಟಿ ಖಾದರ್ ಪ್ರಸ್ತಾಪ ಮಾಡಿದ್ದಾರೆ.

ಬಸ್ಸಿನ ಟಾಪ್ ನಲ್ಲಿ ಕುಳಿತು ಪ್ರಯಾಣಿಸುವಂತ ಸ್ಥಿತಿ ಬಂದಿದ್ದೇಕೆ..? ಸರ್ಕಾರಿ ಬಸ್ ಗಳ ಸಂಚಾರ ಕಡಿಮೆಯಾಗಿದ್ದೇ ಈ ದುರಂತಕ್ಕೆ ಕಾರಣವಾಗಿದೆ. ವ್ಯವಸ್ಥೆ ಸರಿಪಡಿಸುವ ಜವಬ್ದಾರಿ ಸರ್ಕಾರದ ಮೇಲಿದೆ. ಸಮಿತಿ ರಚನೆ ಮಾಡಿ ಸರ್ಕಾರದ ವರದಿ ಪಡೆಯಬೇಕಿದೆ. ಅಪಘಾತದಲ್ಲಿ ಮೃತರಾದವರ ಪರಿಹಾರ ಹೆಚ್ಚಿಸಬೇಕೆಂದು ಯು ಟಿ ಖಾದರ್ ಒತ್ತಾಯಿಸಿದ್ದಾರೆ.

ಸಮಸ್ಯೆ ಬಗೆಹರಿಸಬೇಕಿರುವ ಸಿಎಂ ಬೊಮ್ಮಾಯಿ ಅವರು, ಸಿನಿಮಾ ಟ್ರೇಲರ್ ರಿಲೀಸ್ ಗೆ ಹೋಗಿದ್ದಾರೆಂದು ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಉತ್ತರ ಕೊಟ್ಟಿದ್ದು, ಉನ್ನತಮಟ್ಟದ ಅಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದೆ. ಅಪಘಾತ ಆಗಿರುವಂತ ಸ್ಥಳವನ್ನು ಬ್ಲಾಕ್ ಸ್ಪಾಟ್ ಎಂದು ಪರಿಗಣಿಸಲಾಗಿದೆ. ಅಪಘಾತಕ್ಕೆ ಕಾರಣ ಯಾರು ಎಂಬುದನ್ನು ಚರ್ಚೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡಲಾಗಿದೆ. ಅಷ್ಟೇ ಅಲ್ಲ ವೈಯಕ್ತಿಕವಾಗಿ ನಾನೂ ಕೂಡ 1 ಲಕ್ಷ ಸಹಾಯ ಮಾಡಿದ್ದೇನೆ. ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲಾಗಿದೆ. ಅಧಿಕಾರಿಗಳಿಗೆ ಸರ್ಕಾರಿ ಬಸ್ ಬಿಡುವಂತೆ ಸೂಚನೆ ನೀಡಲಾಗಿದೆ ಎಂದಿದ್ಸಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!