ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ. ಈ ಯುಗಾದಿ ಕೂಡ ಹೊಸ ಹರುಷವ ತರಲಿ ಎಂದೇ ಎಲ್ಲರೂ ಹಾರೈಸುತ್ತಾರೆ. ಯುಗಾದಿ ಎಂದರೆ ಹಿಂದೂಗಳ ಪಾಲಿನ ಹೊಸ ವರ್ಷವೇ ಸರಿ. ಯುಗ + ಆದಿ = ಯುಗಾದಿ. ಈ ದಿನ ಹಲವು ವಿಶೇಷತೆಗಳು ಇದೆ. ಎಷ್ಟೋ ಜನರ ರಾಶಿ ಫಲವು ಬದಲಾಗುತ್ತದೆ. ಭವಿಷ್ಯವೂ ಬದಲಾವಣೆಯಾಗಲಿದೆ. ಆಕಾಶ ವಸ್ತುಗಳ ಭವಿಷ್ಯದ ಸ್ಥಾನಗಳು, ನಕ್ಷತ್ರದ ಪ್ರಮಾಣಗಳು ಮತ್ತು ನಕ್ಷತ್ರಪುಂಜಗಳ ಪರಾಕಾಷ್ಠೆಯ ದಿನಾಂಕಗಳು ಇರುತ್ತದೆ.
ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿಯನ್ನು ಹೊಸ ವರ್ಷದ ದಿನವಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಹೊಸ ಯುಗದ ಆರಂಭವನ್ನು ಸಂಕೇತಿಸುತ್ತದೆ, ಏಕೆಂದರೆ ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನು ಈ ಮಂಗಳಕರ ದಿನದಂದು ಸೃಷ್ಟಿ ಪ್ರಕ್ರಿಯೆಯನ್ನು ಪ್ರಾರಂಭಿಸಿದನು ಎಂಬುದು ಈ ಹಬ್ಬಕ್ಕೆ ಸಂಬಂಧಿಸಿದ ಪೌರಾಣಿಕ ನಂಬಿಕೆಯಾಗಿದೆ.
ಯುಗಾದಿ ಹಬ್ಬ ಎಂದ ಕೂಡಲೇ ಆ ದಿನ ಬೇವು-ಬೆಲ್ಲ ಎರಡನ್ನೂ ಸೇವಿಸುತ್ತೇವೆ. ವಿಶೇಷ ಅರ್ಥವನ್ನೊಳಗೊಂಡಿರುವ ಬೇವು-ಬೆಲ್ಲವನ್ನು ಹಿಂದೂಗಳು ತಪ್ಪದೇ ಯುಗಾದಿ ಹಬ್ಬದಂದು ಸವಿಯುತ್ತಾರೆ. ಕರ್ನಾಟಕದಲ್ಲಿ ಬೇವು-ಬೆಲ್ಲವನ್ನು ತಿನ್ನುವುದು ಸಂಪ್ರದಾಯ. ಕಹಿಯಾದ ಬೇವು ಜೀವನದಲ್ಲಿ ಬರುವ ಕಷ್ಟ, ದುಃಖಗಳು, ತೊಡಕುಗಳನ್ನು ಪ್ರತಿಬಿಂಬಿಸಿದರೆ, ಸಿಹಿಯಾದ ಬೆಲ್ಲ ಜೀವನದಲ್ಲಿ ಬರುವ ಸಂತೋಷ ಸಂಭ್ರಮಗಳ ಸಂಕೇತವಾಗಿದೆ. ಜೀವನದಲ್ಲಿ ಸುಖ-ದುಃಖ ಇರುತ್ತದೆ. ಎರಡನ್ನೂ ಅನುಭವಿಸಬೇಕೆಂಬ ಅರ್ಥವನ್ನು ನೀಡುವ ಬೇವು-ಬೆಲ್ಲವನ್ನು ವರ್ಷದ ಆರಂಭದ ದಿನ ತಿನ್ನಬೇಕು ಎಂದು ನಮ್ಮ ಹಿರಿಯರು ಅಂದಿನಿಂದ ಪದ್ಧತಿಯಾಗಿ ಮಾಡಿಕೊಂಡು ಬಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್