Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ : ಭವಿಷ್ಯ ಬದಲಾವಣೆ, ಬೇವು – ಬೆಲ್ಲದ ಮಹತ್ವ ಇಲ್ಲಿದೆ ಮಾಹಿತಿ

---Advertisement---

 

ಸುದ್ದಿಒನ್ : ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬಂದಿದೆ. ಈ ಯುಗಾದಿ ಕೂಡ ಹೊಸ ಹರುಷವ ತರಲಿ ಎಂದೇ ಎಲ್ಲರೂ ಹಾರೈಸುತ್ತಾರೆ. ಯುಗಾದಿ ಎಂದರೆ ಹಿಂದೂಗಳ ಪಾಲಿನ ಹೊಸ ವರ್ಷವೇ ಸರಿ. ಯುಗ + ಆದಿ = ಯುಗಾದಿ. ಈ ದಿನ ಹಲವು ವಿಶೇಷತೆಗಳು ಇದೆ. ಎಷ್ಟೋ ಜನರ ರಾಶಿ ಫಲವು ಬದಲಾಗುತ್ತದೆ. ಭವಿಷ್ಯವೂ ಬದಲಾವಣೆಯಾಗಲಿದೆ. ಆಕಾಶ ವಸ್ತುಗಳ ಭವಿಷ್ಯದ ಸ್ಥಾನಗಳು, ನಕ್ಷತ್ರದ ಪ್ರಮಾಣಗಳು ಮತ್ತು ನಕ್ಷತ್ರಪುಂಜಗಳ ಪರಾಕಾಷ್ಠೆಯ ದಿನಾಂಕಗಳು ಇರುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿಯನ್ನು ಹೊಸ ವರ್ಷದ ದಿನವಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಹೊಸ ಯುಗದ ಆರಂಭವನ್ನು ಸಂಕೇತಿಸುತ್ತದೆ, ಏಕೆಂದರೆ ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನು ಈ ಮಂಗಳಕರ ದಿನದಂದು ಸೃಷ್ಟಿ ಪ್ರಕ್ರಿಯೆಯನ್ನು ಪ್ರಾರಂಭಿಸಿದನು ಎಂಬುದು ಈ ಹಬ್ಬಕ್ಕೆ ಸಂಬಂಧಿಸಿದ ಪೌರಾಣಿಕ ನಂಬಿಕೆಯಾಗಿದೆ.

 

ಯುಗಾದಿ ಹಬ್ಬ ಎಂದ ಕೂಡಲೇ ಆ ದಿನ ಬೇವು-ಬೆಲ್ಲ ಎರಡನ್ನೂ ಸೇವಿಸುತ್ತೇವೆ. ವಿಶೇಷ ಅರ್ಥವನ್ನೊಳಗೊಂಡಿರುವ ಬೇವು-ಬೆಲ್ಲವನ್ನು ಹಿಂದೂಗಳು ತಪ್ಪದೇ ಯುಗಾದಿ ಹಬ್ಬದಂದು ಸವಿಯುತ್ತಾರೆ. ಕರ್ನಾಟಕದಲ್ಲಿ ಬೇವು-ಬೆಲ್ಲವನ್ನು ತಿನ್ನುವುದು ಸಂಪ್ರದಾಯ. ಕಹಿಯಾದ ಬೇವು ಜೀವನದಲ್ಲಿ ಬರುವ ಕಷ್ಟ, ದುಃಖಗಳು, ತೊಡಕುಗಳನ್ನು ಪ್ರತಿಬಿಂಬಿಸಿದರೆ, ಸಿಹಿಯಾದ ಬೆಲ್ಲ ಜೀವನದಲ್ಲಿ ಬರುವ ಸಂತೋಷ ಸಂಭ್ರಮಗಳ ಸಂಕೇತವಾಗಿದೆ. ಜೀವನದಲ್ಲಿ ಸುಖ-ದುಃಖ ಇರುತ್ತದೆ. ಎರಡನ್ನೂ ಅನುಭವಿಸಬೇಕೆಂಬ ಅರ್ಥವನ್ನು ನೀಡುವ ಬೇವು-ಬೆಲ್ಲವನ್ನು ವರ್ಷದ ಆರಂಭದ ದಿನ ತಿನ್ನಬೇಕು ಎಂದು ನಮ್ಮ ಹಿರಿಯರು ಅಂದಿನಿಂದ ಪದ್ಧತಿಯಾಗಿ ಮಾಡಿಕೊಂಡು ಬಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment