Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಜ್ಜನಪ್ಪ ನಿಧನ ಜಿಲ್ಲೆಗೆ ದೊಡ್ಡ ನಷ್ಟ : ಜಿಲ್ಲಾ ನೀರಾವರಿ ಹೋರಾಟ ಸಮಿತಿ ಹೇಳಿಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂ.20: ಹಿರಿಯ ಪತ್ರಕರ್ತ, ಕತೆಗಾರ, ಪ್ರಗತಿಪರ ಕೃಷಿಕ, ನೀರಾವರಿ ಹೋರಾಟಗಾರ ಜಿ.ಎಸ್.ಉಜ್ಜಿನಪ್ಪ ಅವರ ನಿಧನ ಜಿಲ್ಲೆಗೆ ಅತ್ಯಂತ ನಷ್ಟವನ್ನುಂಟು ಮಾಡಿದೆ ಎಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ. ಬಂಜಗೆರೆ ಜಯಪ್ರಕಾಶ್ ಸಂತಾಪ ಸೂಚಿಸಿದ್ದಾರೆ.

ಪತ್ರಿಕೆ ವಿತರಣೆ ಮೂಲಕ ಪತ್ರಿಕಾ ಕ್ಷೇತ್ರ ಪ್ರವೇಶಿಸಿ ಬಳಿಕ ವರದಿಗಾರರಾಗಿದ್ದ ಉಜ್ಜನಪ್ಪ ಕೇವಲ ವೃತ್ತಿಗೆ ಸೀಮಿತಗೊಳ್ಳದೆ ಜಿಲ್ಲೆಯ ಪ್ರಗತಿಗೆ ಶ್ರಮಿಸಿದ್ದಾರೆ.
ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು. ಬಳಿಕ ಎರಡೂವರೆ ದಶಕಗಳ ನಡೆದ ಹೋರಾಟದೊಂದಿಗೆ ಹೆಜ್ಜೆ ಹಾಕಿ, ಇಳಿ ವಯಸ್ಸಿನಲ್ಲಿಯೂ ಚಳವಳಿಯಲ್ಲಿ ಪಾಲ್ಗೊಳ್ಳುತ್ತಿದ್ದರು.
ವಿಧಾನಸೌಧದಲ್ಲಿ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಸಭೆ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಭದ್ರಾ ಕಾಮಗಾರಿ ವೀಕ್ಷಣೆ, ಜಿಲ್ಲೆಯಲ್ಲಿ ಅನೇಕ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ, ಸಮಿತಿ ಹೋರಾಟದ ವೇಳೆ ಸದಾ ಸಕ್ರಿಯರಾಗುತ್ತಿದ್ದರು.

ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕರಾಗಿ ಭದ್ರಾ ಮೇಲ್ದಂಡೆ ಯೋಜನೆಗಾಗಿ ಅವಿರತವಾಗಿ ಶ್ರಮಿಸುತ್ತಿದ್ದರು. ಜನಪ್ರತಿನಿಧಿಗಳನ್ನು ಭೇಟಿ ಮಾಡುವುದು ಸೇರಿ ವಿವಿಧ ಚಟುವಟಿಕೆಗಳಳ್ಲಿ ಪಾಲ್ಗೊಳ್ಳುವ ಕಾರ್ಯ ಮಾಡುತ್ತಿದ್ದರು. ಕತೆ, ಕವನ, ಲೇಖನ, ಬರವಣಿಗೆ ಮೂಲಕ ಜಿಲ್ಲೆಯ ಸಮಸ್ಯೆಗಳನ್ನು ಜನ-ಜನಪ್ರತಿನಿಧಿಗಳ ಮನಮುಟ್ಟುವಂತೆ ಮಾಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದರು. ಜಿಲ್ಲೆಗೆ ಸಚಿವರು, ಮುಖ್ಯಮಂತ್ರಿಗಳು ಭೇಟಿ ನೀಡಿದ ವೇಳೆ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಗಮನಸೆಳೆಯುವ
ಕೆಲಸ ಮಾಡುತ್ತಿದ್ದು ಸ್ಮರಣೀಯ. ನಾಡಿನ ಹಿರಿಯ ಸಾಹಿತಿಗಳು, ಹೋರಾಟಗಾರರೊಂದಿಗೆ ಒಡನಾಟ ಹೊಂದಿದ್ದರು. ಅನೇಕ ಕೃತಿಗಳನ್ನು ರಚಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಶೀಘ್ರದಲ್ಲಿ ಹೋರಾಟ ಸಮಿತಿ ನೇತೃತ್ವದಲ್ಲಿ ನುಡಿನಮನ ಕಾರ್ಯಕ್ರಮದ ಮೂಲಕ ಉಜ್ಜನಪ್ಪ ಅವರು ನಡೆದುಬಂದ ಹಾದಿ, ಜಿಲ್ಲೆಗೆ ನೀಡಿದ ಕೊಡುಗೆ ಸ್ಮರಿಸುವ ಕೆಲಸ ಮಾಡಲಾಗುವುದು ಎಂದು ಕೋದಂಡರಾಮಯ್ಯ, ಬಂಜಗೆರೆ ಜಯಪ್ರಕಾಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now